11:26 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ ಆತ್ಮಹತ್ಯೆ: ಡೆತ್  ನೋಟ್ ನಲ್ಲಿ ಅವರು ಬರೆದದ್ದೇನು? 

14/09/2021, 23:00

ಉಡುಪಿ(reporterkarnataka.com): ನಗರದ ಹೊರವಲಯದ ಕುಕ್ಕಿಕಟ್ಟೆ ಎಂಬಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ ಮಂಗಳವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಶಾ ಶೆಟ್ಟಿ (48) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ಅವರು ಬಿಜೆಪಿ ಜಿಲ್ಲಾ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ ಹಾಗೂ ತುಳು ಕೂಟ, ಭಜನಾ ಮಂಡಳಿ, ಚಂಡೆ ಬಳಗ ಇವುಗಳಲ್ಲಿ ಸಕ್ರಿಯವಾಗಿದ್ದರೆಂದು ತಿಳಿದು ಬಂದಿದೆ. 

ಮೃತಳ ಬಳಿ ಡೆತ್ ನೋಟ್ ಲಭ್ಯವಾಗಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ ಹಾಗೂ ಇನ್ನಿತರ ವಿಷಯಗಳು ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ. 

ಕಣ್ಣುಗಳು ರಕ್ಷಿಸಿಡುವ ಪ್ರಕ್ರಿಯೆ ನಡೆಸಲು ಶವವನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಉಚಿತ ಅಂಬುಲೇನ್ಸ್ ಸೇವೆಯನ್ನು ಒದಗಿಸಿ ಇಲಾಖೆಗೆ ಸಹಕರಿಸಿದರು. ಘಟನಾ ಸ್ಥಳಕ್ಕೆ ಬಿಜೆಪಿ ಜಿಲ್ಲಾ ಮಹಿಳಾ ಮೊರ್ಚಾದ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ, ಕಾರ್ಯದರ್ಶಿ ರಕ್ಷಿತಾ ಶೆಟ್ಟಿ, ಹಾಗೂ ಮಲಬಾರ್ ಗೋಲ್ಡ್ ಆಭರಣ ಮಳಿಗೆಯ ಗ್ರಾಹಕ ಸಂಪರ್ಕ ಅಧಿಕಾರಿ ಹಫೀಜ್ ರೆಹಮಾನ್ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು