4:25 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 2 ತಿಂಗಳುಗಳಿಂದ ರಕ್ಷಿಸಿಡಲಾಗಿದ್ದ 3 ಮೃತದೇಹಗಳ ಅಂತ್ಯಸಂಸ್ಕಾರ

20/10/2022, 20:36

ಉಡುಪಿ(reporterkarnataka.com): ಇಲ್ಲಿನ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶಿಥಲೀಕೃತ ಶವ ರಕ್ಷಣಾ ಘಟಕದಲ್ಲಿ ಕಳೆದ ಎರಡು ತಿಂಗಳಿಂದ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ಶವಗಳ ಅಂತ್ಯಸಂಸ್ಕಾರವನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿ, ಮಲ್ಪೆ ಪೋಲಿಸ್ ಠಾಣೆ, ನಗರ ಪೋಲಿಸ್ ಠಾಣೆಯವರು ಬೀಡಿನಗುಡ್ಡೆಯ ದಫನಭೂಮಿಯಲ್ಲಿ ನಡೆಸಿದರು. ಮಾಧ್ಯಮ ಪ್ರಕಟಣೆ ನೀಡಿಯೂ ಮೃತರ ವಾರಸುದಾರರು ಬಾರದೆ ಇರುವುದರಿಂದ ಕಾನೂನು ಪ್ರಕ್ರಿಯೆಗಳು ನಡೆದ ಬಳಿಕ ಶವಗಳನ್ನು ಗೌರಯುತವಾಗಿ ಅಂತ್ಯಸಂಸ್ಕಾರ ನಡೆಸಲಾಯಿತು.

ಈ ಸಂದರ್ಭ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಮಲ್ಪೆ ಪೋಲಿಸ್ ಠಾಣೆಯ ಎ.ಎಸ್.ಐ ತನಿಯ, ಹೆಡ್ ಕಾನ್ಸ್ಟೇಬಲ್ ಗಳಾದ ಶ್ರೀಧರ್, ಶಿವ ನಾಯ್ಕ್, ನಗರ ಪೋಲಿಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಹರೀಶ್ ನಾಯ್ಕ್, ಹಾಗೂ ಜೋಸ್ ಆಲೂಕಾಶ್ ಸಿಬ್ಬಂದಿ ರಾಜೇಶ್ ಶೆಟ್ಟಿ, ಜಿತೇಶ್ ಪ್ರಶಾಂತ್, ವಿನೇಶ್, ಪ್ರದೀಪ್ ಅಜ್ಜರಕಾಡು ಭಾಗಿಯಾಗಿದ್ದರು. ಜಿಲ್ಲಾಸ್ಪತ್ರೆ, ನಗರಸಭೆ, ಪ್ಲವರ್ ವಿಷ್ಣು, ಅಣ್ಣಪ್ಪ ಪೂಜಾರಿ ಕರಂಬಳ್ಳಿ, ಯತೀಶ್, ಸಾಜೀ ಕುಮಾರ್ ಅಜ್ಜರಕಾಡು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು