9:49 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 2 ತಿಂಗಳುಗಳಿಂದ ರಕ್ಷಿಸಿಡಲಾಗಿದ್ದ 3 ಮೃತದೇಹಗಳ ಅಂತ್ಯಸಂಸ್ಕಾರ

20/10/2022, 20:36

ಉಡುಪಿ(reporterkarnataka.com): ಇಲ್ಲಿನ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶಿಥಲೀಕೃತ ಶವ ರಕ್ಷಣಾ ಘಟಕದಲ್ಲಿ ಕಳೆದ ಎರಡು ತಿಂಗಳಿಂದ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ಶವಗಳ ಅಂತ್ಯಸಂಸ್ಕಾರವನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿ, ಮಲ್ಪೆ ಪೋಲಿಸ್ ಠಾಣೆ, ನಗರ ಪೋಲಿಸ್ ಠಾಣೆಯವರು ಬೀಡಿನಗುಡ್ಡೆಯ ದಫನಭೂಮಿಯಲ್ಲಿ ನಡೆಸಿದರು. ಮಾಧ್ಯಮ ಪ್ರಕಟಣೆ ನೀಡಿಯೂ ಮೃತರ ವಾರಸುದಾರರು ಬಾರದೆ ಇರುವುದರಿಂದ ಕಾನೂನು ಪ್ರಕ್ರಿಯೆಗಳು ನಡೆದ ಬಳಿಕ ಶವಗಳನ್ನು ಗೌರಯುತವಾಗಿ ಅಂತ್ಯಸಂಸ್ಕಾರ ನಡೆಸಲಾಯಿತು.

ಈ ಸಂದರ್ಭ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಮಲ್ಪೆ ಪೋಲಿಸ್ ಠಾಣೆಯ ಎ.ಎಸ್.ಐ ತನಿಯ, ಹೆಡ್ ಕಾನ್ಸ್ಟೇಬಲ್ ಗಳಾದ ಶ್ರೀಧರ್, ಶಿವ ನಾಯ್ಕ್, ನಗರ ಪೋಲಿಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಹರೀಶ್ ನಾಯ್ಕ್, ಹಾಗೂ ಜೋಸ್ ಆಲೂಕಾಶ್ ಸಿಬ್ಬಂದಿ ರಾಜೇಶ್ ಶೆಟ್ಟಿ, ಜಿತೇಶ್ ಪ್ರಶಾಂತ್, ವಿನೇಶ್, ಪ್ರದೀಪ್ ಅಜ್ಜರಕಾಡು ಭಾಗಿಯಾಗಿದ್ದರು. ಜಿಲ್ಲಾಸ್ಪತ್ರೆ, ನಗರಸಭೆ, ಪ್ಲವರ್ ವಿಷ್ಣು, ಅಣ್ಣಪ್ಪ ಪೂಜಾರಿ ಕರಂಬಳ್ಳಿ, ಯತೀಶ್, ಸಾಜೀ ಕುಮಾರ್ ಅಜ್ಜರಕಾಡು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು