6:51 PM Thursday8 - January 2026
ಬ್ರೇಕಿಂಗ್ ನ್ಯೂಸ್
ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್!

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲೆಯಲ್ಲೂ ಕಾಡಾನೆ ಕಾಟ ಶುರು: ಹೆಬ್ರಿ, ಸೋಮೇಶ್ವರ ಪ್ರದೇಶದಲ್ಲಿ ಒಂಟಿ ಸಲಗದ ದಾಂಧಲೆ; ಪ್ರವಾಸಿಗರೇ ಹುಷಾರ್!

13/06/2024, 12:54

ಕಾರ್ಕಳ(reporterkarnataka.com): ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಸೀಮಿತವಾಗಿದ್ದ ಕಾಡಾನೆ ಹಾವಳಿ ಈಗ ಉಡುಪಿ ಜಿಲ್ಲೆಯಲ್ಲಿಯೂ ಸದ್ದಿಲ್ಲದೆ ಆರಂಭವಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.


ಕಾರ್ಕಳ ತಾಲೂಕಿನ ಹೆಬ್ರಿ, ಸೋಮೇಶ್ವರ, ನಾಡ್ಪಾಲು ಕೂಡ್ಲು, ಆಗುಂಬೆ ಮಾರ್ಗವಾಗಿ ಸಾಗುವವರು ಹುಷಾರ್ ಆಗಿ ಸಂಚರಿಸುವ ಪರಿಸ್ಥಿತಿ ಏರ್ಪಟ್ಟಿದೆ. ಯಾಕೆಂದರೆ ಒಂಟಿ ಸಲಗವೊಂದು ಹೆಬ್ರಿ, ಆಗುಂಬೆ ವ್ಯಾಪ್ತಿಯ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿರುವುದು ಸ್ಥಳೀಯರಿಗೆ ಹಾಗೂ ರಸ್ತೆಯಲ್ಲಿ ಸಾಗುವ ಜನರ ನಿದ್ದೆಗೆಡಿಸಿದೆ.
ಕಳೆದ ನಾಲ್ಕು ದಿನಗಳಿಂದ ಹೆಬ್ರಿ ತಾಲೂಕಿನ ನಾಡ್ಪಾಲು ನೆಲ್ಲಿಕಟ್ಟೆ ಮೀನಾ ಪೂಜಾರ್ತಿ ಎಂಬವರ ಮನೆ ಬಳಿ ಆನೆ ರಾತ್ರಿ ವೇಳೆಯಲ್ಲಿ ದಾಳಿ‌ಮಾಡುತ್ತಿದ್ದು ಮರದಲ್ಲಿದ್ದ ಹಲಸು ಹಾಗೂ ತೆಂಗು ಬಾಳೆ, ನಾಶಮಾಡಿದೆ. ಆದರೆ ಮುಂಜಾವಿನಲ್ಲಿ‌ ಆನೆ ಕಾಡಿಗೆ ಹೋಗಿ ತಪ್ಪಿಸಿಕೊಳ್ಳುತ್ತಿದೆ. ಯಾವುದೇ ಜೀವ ಹಾನಿ ಸಂಭವಿಸಿಲ್ಲ.
ಕಳೆದ ಬಾರಿ ಕಬ್ಬಿನಾಲೆ, ಮುಂಡಾಣಿ, ತಿಂಗಾಳೆ ಬಳಿ ಇದೆ ಆನೆಯು ಅಲ್ಪ‌ಮಟ್ಟಿಗೆ ಕೃಷಿ ಯನ್ನು ಹಾನಿಗೊಳಿಸಿತ್ತು. ಅರಣ್ಯ ಇಲಾಖೆಯ ಮಾಹಿತಿ ಪ್ರಕಾರ ಈ ಒಂಟಿ ಸಲಗವು ಸುಳ್ಯದ ಕುಕ್ಕೆ ಸುಬ್ರಹ್ಮಣ್ಯ ದಿಂದ ಬೆಳ್ತಂಗಡಿ ಮೂಲಕ ನಾರಾವಿ, ಮಾಳ ಘಾಟ್ ಮೂಲಕ ವಾಲಿಕುಂಜ ಬೆಟ್ಟದ ಮೇಲಿನ ಕಬ್ಬಿನಾಲೆಯ ತಿಂಗಳಮಕ್ಕಿ , ತೆಂಗುಮಾರ್, ಕಿಗ್ಗ , ಬರ್ಕಣ, ಮಲ್ಲಂದೂರು , ಆಗುಂಬೆಯ ಮೂಲಕ ನಗರ ಹೊಸನಗರ ವರೆಗೆ ಸಂಚರಿಸುತ್ತದೆ. ಆದರೆ ಯಾವುದೇ ಪ್ರಾಣ ಹಾನಿ ಮಾಡಿಲ್ಲ.
ಕಳೆದ ಇಪ್ಪತ್ತು ವರ್ಷಗಳ ಹಿಂದೆ ಹೆಬ್ರಿ ಸಮೀಪದ ಸಂತೆಕಟ್ಟೆ ಎಂಬಲ್ಲಿ ಒಂಟಿ‌ ಸಲಗವು ಕೋಲಿನ‌ ಮೂಲಕ ಹೊಡೆಯಲು ಹೋದ ಓರ್ವ ವ್ಯಕ್ತಿಯನ್ನು ಸೊಂಡಿಲಿನ ಮ‌ೂಲಕ ನೆಲಕ್ಕೆ ಬಿಸಾಡಿತ್ತು.
*ಪ್ರವಾಸಿಗರೆ ಹುಷಾರು:* ಕಬ್ಬಿನಾಲೆ ಫಾಲ್ಸ್ ಅಗುಂಬೆ ಸೂರ್ಯಾಸ್ತ ವೀಕ್ಷಣಾ ಪ್ರದೇಶದ, ಮಲ್ಲಂದೂರು ಬರ್ಕಣ ಫಾಲ್ಸ್ ಗಳಿಗೆ ಬರುವ ಪ್ರವಾಸಿಗರೆ ಹುಷಾರಾಗಿರಿ. ಒಂಟಿ‌ ಸಲಗವು ಅಲ್ಲಲ್ಲಿ ಕಾಣಿಸುತ್ತಿದೆ. ಅರಣ್ಯ ಇಲಾಖೆಯ ಮಾಹಿತಿಯನ್ನು ಆಧರಿಸಿ ಸಂಚರಿಸುವುದು ಒಳಿತು. ಅರಣ್ಯ ಇಲಾಖೆ ಸಹಕಾರ ಪಡೆದುಕೊಳ್ಳಿ.

ಇತ್ತೀಚಿನ ಸುದ್ದಿ

ಜಾಹೀರಾತು