12:37 AM Tuesday22 - October 2024
ಬ್ರೇಕಿಂಗ್ ನ್ಯೂಸ್
ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ…

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲೆಯಲ್ಲೂ ಕಾಡಾನೆ ಕಾಟ ಶುರು: ಹೆಬ್ರಿ, ಸೋಮೇಶ್ವರ ಪ್ರದೇಶದಲ್ಲಿ ಒಂಟಿ ಸಲಗದ ದಾಂಧಲೆ; ಪ್ರವಾಸಿಗರೇ ಹುಷಾರ್!

13/06/2024, 12:54

ಕಾರ್ಕಳ(reporterkarnataka.com): ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಸೀಮಿತವಾಗಿದ್ದ ಕಾಡಾನೆ ಹಾವಳಿ ಈಗ ಉಡುಪಿ ಜಿಲ್ಲೆಯಲ್ಲಿಯೂ ಸದ್ದಿಲ್ಲದೆ ಆರಂಭವಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.


ಕಾರ್ಕಳ ತಾಲೂಕಿನ ಹೆಬ್ರಿ, ಸೋಮೇಶ್ವರ, ನಾಡ್ಪಾಲು ಕೂಡ್ಲು, ಆಗುಂಬೆ ಮಾರ್ಗವಾಗಿ ಸಾಗುವವರು ಹುಷಾರ್ ಆಗಿ ಸಂಚರಿಸುವ ಪರಿಸ್ಥಿತಿ ಏರ್ಪಟ್ಟಿದೆ. ಯಾಕೆಂದರೆ ಒಂಟಿ ಸಲಗವೊಂದು ಹೆಬ್ರಿ, ಆಗುಂಬೆ ವ್ಯಾಪ್ತಿಯ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿರುವುದು ಸ್ಥಳೀಯರಿಗೆ ಹಾಗೂ ರಸ್ತೆಯಲ್ಲಿ ಸಾಗುವ ಜನರ ನಿದ್ದೆಗೆಡಿಸಿದೆ.
ಕಳೆದ ನಾಲ್ಕು ದಿನಗಳಿಂದ ಹೆಬ್ರಿ ತಾಲೂಕಿನ ನಾಡ್ಪಾಲು ನೆಲ್ಲಿಕಟ್ಟೆ ಮೀನಾ ಪೂಜಾರ್ತಿ ಎಂಬವರ ಮನೆ ಬಳಿ ಆನೆ ರಾತ್ರಿ ವೇಳೆಯಲ್ಲಿ ದಾಳಿ‌ಮಾಡುತ್ತಿದ್ದು ಮರದಲ್ಲಿದ್ದ ಹಲಸು ಹಾಗೂ ತೆಂಗು ಬಾಳೆ, ನಾಶಮಾಡಿದೆ. ಆದರೆ ಮುಂಜಾವಿನಲ್ಲಿ‌ ಆನೆ ಕಾಡಿಗೆ ಹೋಗಿ ತಪ್ಪಿಸಿಕೊಳ್ಳುತ್ತಿದೆ. ಯಾವುದೇ ಜೀವ ಹಾನಿ ಸಂಭವಿಸಿಲ್ಲ.
ಕಳೆದ ಬಾರಿ ಕಬ್ಬಿನಾಲೆ, ಮುಂಡಾಣಿ, ತಿಂಗಾಳೆ ಬಳಿ ಇದೆ ಆನೆಯು ಅಲ್ಪ‌ಮಟ್ಟಿಗೆ ಕೃಷಿ ಯನ್ನು ಹಾನಿಗೊಳಿಸಿತ್ತು. ಅರಣ್ಯ ಇಲಾಖೆಯ ಮಾಹಿತಿ ಪ್ರಕಾರ ಈ ಒಂಟಿ ಸಲಗವು ಸುಳ್ಯದ ಕುಕ್ಕೆ ಸುಬ್ರಹ್ಮಣ್ಯ ದಿಂದ ಬೆಳ್ತಂಗಡಿ ಮೂಲಕ ನಾರಾವಿ, ಮಾಳ ಘಾಟ್ ಮೂಲಕ ವಾಲಿಕುಂಜ ಬೆಟ್ಟದ ಮೇಲಿನ ಕಬ್ಬಿನಾಲೆಯ ತಿಂಗಳಮಕ್ಕಿ , ತೆಂಗುಮಾರ್, ಕಿಗ್ಗ , ಬರ್ಕಣ, ಮಲ್ಲಂದೂರು , ಆಗುಂಬೆಯ ಮೂಲಕ ನಗರ ಹೊಸನಗರ ವರೆಗೆ ಸಂಚರಿಸುತ್ತದೆ. ಆದರೆ ಯಾವುದೇ ಪ್ರಾಣ ಹಾನಿ ಮಾಡಿಲ್ಲ.
ಕಳೆದ ಇಪ್ಪತ್ತು ವರ್ಷಗಳ ಹಿಂದೆ ಹೆಬ್ರಿ ಸಮೀಪದ ಸಂತೆಕಟ್ಟೆ ಎಂಬಲ್ಲಿ ಒಂಟಿ‌ ಸಲಗವು ಕೋಲಿನ‌ ಮೂಲಕ ಹೊಡೆಯಲು ಹೋದ ಓರ್ವ ವ್ಯಕ್ತಿಯನ್ನು ಸೊಂಡಿಲಿನ ಮ‌ೂಲಕ ನೆಲಕ್ಕೆ ಬಿಸಾಡಿತ್ತು.
*ಪ್ರವಾಸಿಗರೆ ಹುಷಾರು:* ಕಬ್ಬಿನಾಲೆ ಫಾಲ್ಸ್ ಅಗುಂಬೆ ಸೂರ್ಯಾಸ್ತ ವೀಕ್ಷಣಾ ಪ್ರದೇಶದ, ಮಲ್ಲಂದೂರು ಬರ್ಕಣ ಫಾಲ್ಸ್ ಗಳಿಗೆ ಬರುವ ಪ್ರವಾಸಿಗರೆ ಹುಷಾರಾಗಿರಿ. ಒಂಟಿ‌ ಸಲಗವು ಅಲ್ಲಲ್ಲಿ ಕಾಣಿಸುತ್ತಿದೆ. ಅರಣ್ಯ ಇಲಾಖೆಯ ಮಾಹಿತಿಯನ್ನು ಆಧರಿಸಿ ಸಂಚರಿಸುವುದು ಒಳಿತು. ಅರಣ್ಯ ಇಲಾಖೆ ಸಹಕಾರ ಪಡೆದುಕೊಳ್ಳಿ.

ಇತ್ತೀಚಿನ ಸುದ್ದಿ

ಜಾಹೀರಾತು