8:26 PM Monday20 - January 2025
ಬ್ರೇಕಿಂಗ್ ನ್ಯೂಸ್
ಮಹಾತ್ಮ ಗಾಂಧಿ ರಿಯಲ್ ಗಾಂಧಿ, ಸೋನಿಯಾ, ರಾಹುಲ್, ಪ್ರಿಯಾಂಕ ಅವರು ನಕಲಿ ಗಾಂಧಿಗಳು:… ಬೆಂಗಳೂರು ಐಟಿ ಹಬ್, ವ್ಯೂಹಾತ್ಮಕ ನಗರ; ಇಲ್ಲೇ ಐಕ್ಯಾಟ್ ಕೇಂದ್ರ ಖಚಿತ: ಕೇಂದ್ರ… ಮುಡಾ ಕುರಿತು ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ 5ರ ಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಜನವಾದಿ ಮಹಿಳಾ… ಮಂಗಳೂರಿನ ಜನತೆಗೆ ಕಲುಷಿತ ನೀರು ಪೂರೈಕೆ: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ… ಭಾರತಿ ಏರ್‌ಟೆಲ್ ಮತ್ತು ಬಜಾಜ್ ಫೈನಾನ್ಸ್ ನಿಂದ ಹಣಕಾಸಿನ ಸೇವೆಗಳಿಗಾಗಿ ಅತಿದೊಡ್ಡ ಡಿಜಿಟಲ್… ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರ ಸಮ್ಮತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಪಂ ಮಾಜಿ ಅಧ್ಯಕ್ಷರಿಂದ ಅಂತ್ಯ ಸಂಸ್ಕಾರ: ರಾತ್ರಿ… ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ… ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲೆಯಲ್ಲೂ ಕಾಡಾನೆ ಕಾಟ ಶುರು: ಹೆಬ್ರಿ, ಸೋಮೇಶ್ವರ ಪ್ರದೇಶದಲ್ಲಿ ಒಂಟಿ ಸಲಗದ ದಾಂಧಲೆ; ಪ್ರವಾಸಿಗರೇ ಹುಷಾರ್!

13/06/2024, 12:54

ಕಾರ್ಕಳ(reporterkarnataka.com): ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ಸೀಮಿತವಾಗಿದ್ದ ಕಾಡಾನೆ ಹಾವಳಿ ಈಗ ಉಡುಪಿ ಜಿಲ್ಲೆಯಲ್ಲಿಯೂ ಸದ್ದಿಲ್ಲದೆ ಆರಂಭವಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.


ಕಾರ್ಕಳ ತಾಲೂಕಿನ ಹೆಬ್ರಿ, ಸೋಮೇಶ್ವರ, ನಾಡ್ಪಾಲು ಕೂಡ್ಲು, ಆಗುಂಬೆ ಮಾರ್ಗವಾಗಿ ಸಾಗುವವರು ಹುಷಾರ್ ಆಗಿ ಸಂಚರಿಸುವ ಪರಿಸ್ಥಿತಿ ಏರ್ಪಟ್ಟಿದೆ. ಯಾಕೆಂದರೆ ಒಂಟಿ ಸಲಗವೊಂದು ಹೆಬ್ರಿ, ಆಗುಂಬೆ ವ್ಯಾಪ್ತಿಯ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿರುವುದು ಸ್ಥಳೀಯರಿಗೆ ಹಾಗೂ ರಸ್ತೆಯಲ್ಲಿ ಸಾಗುವ ಜನರ ನಿದ್ದೆಗೆಡಿಸಿದೆ.
ಕಳೆದ ನಾಲ್ಕು ದಿನಗಳಿಂದ ಹೆಬ್ರಿ ತಾಲೂಕಿನ ನಾಡ್ಪಾಲು ನೆಲ್ಲಿಕಟ್ಟೆ ಮೀನಾ ಪೂಜಾರ್ತಿ ಎಂಬವರ ಮನೆ ಬಳಿ ಆನೆ ರಾತ್ರಿ ವೇಳೆಯಲ್ಲಿ ದಾಳಿ‌ಮಾಡುತ್ತಿದ್ದು ಮರದಲ್ಲಿದ್ದ ಹಲಸು ಹಾಗೂ ತೆಂಗು ಬಾಳೆ, ನಾಶಮಾಡಿದೆ. ಆದರೆ ಮುಂಜಾವಿನಲ್ಲಿ‌ ಆನೆ ಕಾಡಿಗೆ ಹೋಗಿ ತಪ್ಪಿಸಿಕೊಳ್ಳುತ್ತಿದೆ. ಯಾವುದೇ ಜೀವ ಹಾನಿ ಸಂಭವಿಸಿಲ್ಲ.
ಕಳೆದ ಬಾರಿ ಕಬ್ಬಿನಾಲೆ, ಮುಂಡಾಣಿ, ತಿಂಗಾಳೆ ಬಳಿ ಇದೆ ಆನೆಯು ಅಲ್ಪ‌ಮಟ್ಟಿಗೆ ಕೃಷಿ ಯನ್ನು ಹಾನಿಗೊಳಿಸಿತ್ತು. ಅರಣ್ಯ ಇಲಾಖೆಯ ಮಾಹಿತಿ ಪ್ರಕಾರ ಈ ಒಂಟಿ ಸಲಗವು ಸುಳ್ಯದ ಕುಕ್ಕೆ ಸುಬ್ರಹ್ಮಣ್ಯ ದಿಂದ ಬೆಳ್ತಂಗಡಿ ಮೂಲಕ ನಾರಾವಿ, ಮಾಳ ಘಾಟ್ ಮೂಲಕ ವಾಲಿಕುಂಜ ಬೆಟ್ಟದ ಮೇಲಿನ ಕಬ್ಬಿನಾಲೆಯ ತಿಂಗಳಮಕ್ಕಿ , ತೆಂಗುಮಾರ್, ಕಿಗ್ಗ , ಬರ್ಕಣ, ಮಲ್ಲಂದೂರು , ಆಗುಂಬೆಯ ಮೂಲಕ ನಗರ ಹೊಸನಗರ ವರೆಗೆ ಸಂಚರಿಸುತ್ತದೆ. ಆದರೆ ಯಾವುದೇ ಪ್ರಾಣ ಹಾನಿ ಮಾಡಿಲ್ಲ.
ಕಳೆದ ಇಪ್ಪತ್ತು ವರ್ಷಗಳ ಹಿಂದೆ ಹೆಬ್ರಿ ಸಮೀಪದ ಸಂತೆಕಟ್ಟೆ ಎಂಬಲ್ಲಿ ಒಂಟಿ‌ ಸಲಗವು ಕೋಲಿನ‌ ಮೂಲಕ ಹೊಡೆಯಲು ಹೋದ ಓರ್ವ ವ್ಯಕ್ತಿಯನ್ನು ಸೊಂಡಿಲಿನ ಮ‌ೂಲಕ ನೆಲಕ್ಕೆ ಬಿಸಾಡಿತ್ತು.
*ಪ್ರವಾಸಿಗರೆ ಹುಷಾರು:* ಕಬ್ಬಿನಾಲೆ ಫಾಲ್ಸ್ ಅಗುಂಬೆ ಸೂರ್ಯಾಸ್ತ ವೀಕ್ಷಣಾ ಪ್ರದೇಶದ, ಮಲ್ಲಂದೂರು ಬರ್ಕಣ ಫಾಲ್ಸ್ ಗಳಿಗೆ ಬರುವ ಪ್ರವಾಸಿಗರೆ ಹುಷಾರಾಗಿರಿ. ಒಂಟಿ‌ ಸಲಗವು ಅಲ್ಲಲ್ಲಿ ಕಾಣಿಸುತ್ತಿದೆ. ಅರಣ್ಯ ಇಲಾಖೆಯ ಮಾಹಿತಿಯನ್ನು ಆಧರಿಸಿ ಸಂಚರಿಸುವುದು ಒಳಿತು. ಅರಣ್ಯ ಇಲಾಖೆ ಸಹಕಾರ ಪಡೆದುಕೊಳ್ಳಿ.

ಇತ್ತೀಚಿನ ಸುದ್ದಿ

ಜಾಹೀರಾತು