2:11 AM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಉಡುಪಿ ಕೃಷ್ಣಾಪುರ ಶ್ರೀಗಳ ಭಾವೀ ಪರ್ಯಾಯ  ಮಹೋತ್ಸವಕ್ಕೆ ಭಾರಿ ಸಿದ್ಧತೆ: ಕಟ್ಟಿಗೆ ಮುಹೂರ್ತ ಸಂಪನ್ನ

11/07/2021, 17:11

ಉಡುಪಿ(reporterkarnataka news): ಭಾವಿ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ನಡೆಯುವ ನಾಲ್ಕು ಪ್ರಮುಖ ವಿಧಿ ವಿಧಾನಗಳಲ್ಲೊಂದಾದ ಕಟ್ಟಿಗೆ ಮುಹೂರ್ತ ಭಾನುವಾರ ಭಕ್ತಿ ಸಡಗರದಿಂದ ಉಡುಪಿಯಲ್ಲಿ ನಡೆಯಿತು. ಅಷ್ಟ ಮಠದ ಯತಿಗಳು, ಪುರೋಹಿತರು, ವೈದಿಕರು ಉಪಸ್ಥಿತರಿದ್ದರು.

ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರ ನಾಲ್ಕನೇ ಪರ್ಯಾಯ ಮಹೋತ್ಸವ ಮುಂದಿನ ವರ್ಷ ಜನವರಿ 18ರಂದು ನಡೆಯಲಿದೆ.

ಅಷ್ಟ ಮಠಗಳ ಯತಿಗಳಲ್ಲಿ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು ಅತ್ಯಂತ ಹಿರಿಯವರಾಗಿದ್ದಾರೆ. ಅವರ ಪರ್ಯಾಯಕ್ಕೆ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ ಭಾನುವಾರ ನಡೆಯಿತು. ಕಟ್ಟಿಗೆಯ ರಥವನ್ನೇ ಉಡುಪಿ ಮಠದ ಪರಿಸರದಲ್ಲಿ ನಿರ್ಮಿಸಲಾಗುತ್ತದೆ.

ಕೃಷ್ಣಾಪುರ ಮಠದ ಭಾವಿ ಪರ್ಯಾಯದ ಅಂಗವಾಗಿ ಕಳೆದ ಡಿಸೆಂಬರ್ 1ರಂದು ಕೃಷ್ಣಾಪುರ ಮಠದ ಪರಿಸರದಲ್ಲಿ ಬಾಳೆ ಮುಹೂರ್ತ ನಡೆದಿತ್ತು. ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ನಡೆಯುವ ಅನ್ನದಾಸೋಹಕ್ಕೆ ಬಾಳೆ ಎಲೆ ಪೂರೈಕೆಯ ಸಂಕೇತವಾಗಿ ಬಾಳೆ ಮುಹೂರ್ತ ನಡೆಸಲಾಗುತ್ತದೆ. ಮಾರ್ಚ್ 17ರಂದು ಅಕ್ಕಿ ಮುಹೂರ್ತ ನಡೆದಿತ್ತು. ಪರ್ಯಾಯ ಮಹೋತ್ಸವಕ್ಕೆ ಬೇಕಾಗುವಷ್ಟು ಅಕ್ಕಿಯನ್ನು ಸಂಗ್ರಹಿಸಿಡುವ ಸಂಕೇತವಾಗಿ ಅಕ್ಕಿ ಮುಹೂರ್ತ ನಡೆಸಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು