1:12 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಉಡುಪಿ ಕೃಷ್ಣಾಪುರ ಶ್ರೀಗಳ ಭಾವೀ ಪರ್ಯಾಯ  ಮಹೋತ್ಸವಕ್ಕೆ ಭಾರಿ ಸಿದ್ಧತೆ: ಕಟ್ಟಿಗೆ ಮುಹೂರ್ತ ಸಂಪನ್ನ

11/07/2021, 17:11

ಉಡುಪಿ(reporterkarnataka news): ಭಾವಿ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ನಡೆಯುವ ನಾಲ್ಕು ಪ್ರಮುಖ ವಿಧಿ ವಿಧಾನಗಳಲ್ಲೊಂದಾದ ಕಟ್ಟಿಗೆ ಮುಹೂರ್ತ ಭಾನುವಾರ ಭಕ್ತಿ ಸಡಗರದಿಂದ ಉಡುಪಿಯಲ್ಲಿ ನಡೆಯಿತು. ಅಷ್ಟ ಮಠದ ಯತಿಗಳು, ಪುರೋಹಿತರು, ವೈದಿಕರು ಉಪಸ್ಥಿತರಿದ್ದರು.

ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರ ನಾಲ್ಕನೇ ಪರ್ಯಾಯ ಮಹೋತ್ಸವ ಮುಂದಿನ ವರ್ಷ ಜನವರಿ 18ರಂದು ನಡೆಯಲಿದೆ.

ಅಷ್ಟ ಮಠಗಳ ಯತಿಗಳಲ್ಲಿ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು ಅತ್ಯಂತ ಹಿರಿಯವರಾಗಿದ್ದಾರೆ. ಅವರ ಪರ್ಯಾಯಕ್ಕೆ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ ಭಾನುವಾರ ನಡೆಯಿತು. ಕಟ್ಟಿಗೆಯ ರಥವನ್ನೇ ಉಡುಪಿ ಮಠದ ಪರಿಸರದಲ್ಲಿ ನಿರ್ಮಿಸಲಾಗುತ್ತದೆ.

ಕೃಷ್ಣಾಪುರ ಮಠದ ಭಾವಿ ಪರ್ಯಾಯದ ಅಂಗವಾಗಿ ಕಳೆದ ಡಿಸೆಂಬರ್ 1ರಂದು ಕೃಷ್ಣಾಪುರ ಮಠದ ಪರಿಸರದಲ್ಲಿ ಬಾಳೆ ಮುಹೂರ್ತ ನಡೆದಿತ್ತು. ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ನಡೆಯುವ ಅನ್ನದಾಸೋಹಕ್ಕೆ ಬಾಳೆ ಎಲೆ ಪೂರೈಕೆಯ ಸಂಕೇತವಾಗಿ ಬಾಳೆ ಮುಹೂರ್ತ ನಡೆಸಲಾಗುತ್ತದೆ. ಮಾರ್ಚ್ 17ರಂದು ಅಕ್ಕಿ ಮುಹೂರ್ತ ನಡೆದಿತ್ತು. ಪರ್ಯಾಯ ಮಹೋತ್ಸವಕ್ಕೆ ಬೇಕಾಗುವಷ್ಟು ಅಕ್ಕಿಯನ್ನು ಸಂಗ್ರಹಿಸಿಡುವ ಸಂಕೇತವಾಗಿ ಅಕ್ಕಿ ಮುಹೂರ್ತ ನಡೆಸಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು