7:55 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಉಡುಪಿ: ಮಲಬಾರ್ ಗೋಲ್ಡ್‌ನಿಂದ 29 ವಸತಿರಹಿತರಿಗೆ 26 ಲಕ್ಷ ರೂ. ಸಹಾಯಧನ ವಿತರಣೆ

09/10/2021, 08:55

ಉಡುಪಿ(reporterkarnataka.com): ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಸಿಎಸ್‌ಆರ್ ಯೋಜನೆಯಡಿಯಲ್ಲಿ 29 ಅರ್ಹ ವಸತಿ ರಹಿತ ಕುಟುಂಬಗಳಿಗೆ ಒಟ್ಟು 26 ಲಕ್ಷ ರೂ. ಸಹಾಯ ಧನದ ಚೆಕ್ ವಿತರಣಾ ಸಮಾರಂಭ ಶುಕ್ರವಾರ ಮಲಬಾರ್ ಗೋಲ್ಡ್ ಉಡುಪಿ ಮಳಿಗೆಯಲ್ಲಿ ನಡೆಯಿತು.

ಫಲಾನುಭವಿಗಳಿಗೆ ಚೆಕ್ ವಿತರಿಸಿದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಮಾತನಾಡಿ, ಮಲಬಾರ್ ಗೋಲ್ಡ್ ಆರ್ಥಿಕ ವ್ಯವಹಾರದ ಜೊತೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವುದು ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ. ಆರ್ಥಿಕ, ಶೈಕ್ಷಣಿಕ ಸಾಮಾಜಿಕವಾಗಿ ನೆರವು ನೀಡುವ ಮೂಲಕ ಈ ಸಂಸ್ಥೆ ಸಮಾಜಮುಖಿ ಕೆಲಸ ಮಾಡುತ್ತಿದೆ. ತಮ್ಮ ಲಾಭದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಕ್ಕೆ ವಿನಿಯೋಗಿಸುತ್ತಿ ರುವುದು ಶ್ಲಾಘನೀಯ ಎಂದು ತಿಳಿಸಿದರು. 

ಪರ್ಕಳ ದೇವಿನಗರದ ಬಳಕೆದಾರರ ವೇದಿಕೆಯ ಗೌರವಾಧ್ಯಕ್ಷ ಹಾಜಿ ಕೆ. ಅಬೂಬಕರ್ ಪರ್ಕಳ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಸಾಮಾಜಿ ಕಾರ್ಯಕರ್ತೆ ವಿನುತಾ ಕಿರಣ್, ಸಮಾಜ ಸೇವಕ ವಿಲ್ಫ್ರೇಡ್ ಡಿಸೋಜ, ಕಿದಿಯೂರು ಉದಯ ಕುಮಾರ್ ಫ್ಯಾಮಿಲಿ ಟ್ರಸ್ಟ್‌ನ ಉದಯ ಕುಮಾರ್ ಶೆಟ್ಟಿ, ಸಮಾಜ ಸೇವಕ ಲೀಲಾಧರ ಶೆಟ್ಟಿ, ಜಿಪಂ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಸುರೇಶ್ ಮರಕಲ, ಶಿಕ್ಷಕರಾದ ಮನು ಹಂದಾಡಿ, ಅರ್ಪಿತಾ ಶೆಟ್ಟಿ ಕಟಪಾಡಿ, ವಂದನಾ ರೈ ಕಾರ್ಕಳ, ನಿರ್ಮಲ್ ಕುಮಾರ್ ಹೆಗ್ಡೆ ಕಾಪು, ಚಿತ್ರ ಕಲಾವಿದ ಅಕ್ಷಯ್ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು. ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಜಿಆರ್‌ಎಂ ರಾಘವೇಂದ್ರ ನಾಯಕ್, ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ, ಶಾಖಾ ವ್ಯವಸ್ಥಾಪಕ ಪುರಂದರ ತಿಂಗಳಾಯ ಉಪಸ್ಥಿತರಿದ್ದರು. ಆರ್.ಜೆ.ಎರಾಲ್ ಸ್ವಾಗತಿಸಿ, ಕಾರ್ಯ ಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು