6:06 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಉಡುಪಿ: ಮಲಬಾರ್ ಗೋಲ್ಡ್‌ನಿಂದ 29 ವಸತಿರಹಿತರಿಗೆ 26 ಲಕ್ಷ ರೂ. ಸಹಾಯಧನ ವಿತರಣೆ

09/10/2021, 08:55

ಉಡುಪಿ(reporterkarnataka.com): ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಸಿಎಸ್‌ಆರ್ ಯೋಜನೆಯಡಿಯಲ್ಲಿ 29 ಅರ್ಹ ವಸತಿ ರಹಿತ ಕುಟುಂಬಗಳಿಗೆ ಒಟ್ಟು 26 ಲಕ್ಷ ರೂ. ಸಹಾಯ ಧನದ ಚೆಕ್ ವಿತರಣಾ ಸಮಾರಂಭ ಶುಕ್ರವಾರ ಮಲಬಾರ್ ಗೋಲ್ಡ್ ಉಡುಪಿ ಮಳಿಗೆಯಲ್ಲಿ ನಡೆಯಿತು.

ಫಲಾನುಭವಿಗಳಿಗೆ ಚೆಕ್ ವಿತರಿಸಿದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಮಾತನಾಡಿ, ಮಲಬಾರ್ ಗೋಲ್ಡ್ ಆರ್ಥಿಕ ವ್ಯವಹಾರದ ಜೊತೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವುದು ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ. ಆರ್ಥಿಕ, ಶೈಕ್ಷಣಿಕ ಸಾಮಾಜಿಕವಾಗಿ ನೆರವು ನೀಡುವ ಮೂಲಕ ಈ ಸಂಸ್ಥೆ ಸಮಾಜಮುಖಿ ಕೆಲಸ ಮಾಡುತ್ತಿದೆ. ತಮ್ಮ ಲಾಭದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಕ್ಕೆ ವಿನಿಯೋಗಿಸುತ್ತಿ ರುವುದು ಶ್ಲಾಘನೀಯ ಎಂದು ತಿಳಿಸಿದರು. 

ಪರ್ಕಳ ದೇವಿನಗರದ ಬಳಕೆದಾರರ ವೇದಿಕೆಯ ಗೌರವಾಧ್ಯಕ್ಷ ಹಾಜಿ ಕೆ. ಅಬೂಬಕರ್ ಪರ್ಕಳ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಸಾಮಾಜಿ ಕಾರ್ಯಕರ್ತೆ ವಿನುತಾ ಕಿರಣ್, ಸಮಾಜ ಸೇವಕ ವಿಲ್ಫ್ರೇಡ್ ಡಿಸೋಜ, ಕಿದಿಯೂರು ಉದಯ ಕುಮಾರ್ ಫ್ಯಾಮಿಲಿ ಟ್ರಸ್ಟ್‌ನ ಉದಯ ಕುಮಾರ್ ಶೆಟ್ಟಿ, ಸಮಾಜ ಸೇವಕ ಲೀಲಾಧರ ಶೆಟ್ಟಿ, ಜಿಪಂ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಸುರೇಶ್ ಮರಕಲ, ಶಿಕ್ಷಕರಾದ ಮನು ಹಂದಾಡಿ, ಅರ್ಪಿತಾ ಶೆಟ್ಟಿ ಕಟಪಾಡಿ, ವಂದನಾ ರೈ ಕಾರ್ಕಳ, ನಿರ್ಮಲ್ ಕುಮಾರ್ ಹೆಗ್ಡೆ ಕಾಪು, ಚಿತ್ರ ಕಲಾವಿದ ಅಕ್ಷಯ್ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು. ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಜಿಆರ್‌ಎಂ ರಾಘವೇಂದ್ರ ನಾಯಕ್, ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ, ಶಾಖಾ ವ್ಯವಸ್ಥಾಪಕ ಪುರಂದರ ತಿಂಗಳಾಯ ಉಪಸ್ಥಿತರಿದ್ದರು. ಆರ್.ಜೆ.ಎರಾಲ್ ಸ್ವಾಗತಿಸಿ, ಕಾರ್ಯ ಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು