8:26 PM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಉಡುಪಿ: ಮಲಬಾರ್ ಗೋಲ್ಡ್‌ನಿಂದ 29 ವಸತಿರಹಿತರಿಗೆ 26 ಲಕ್ಷ ರೂ. ಸಹಾಯಧನ ವಿತರಣೆ

09/10/2021, 08:55

ಉಡುಪಿ(reporterkarnataka.com): ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಸಿಎಸ್‌ಆರ್ ಯೋಜನೆಯಡಿಯಲ್ಲಿ 29 ಅರ್ಹ ವಸತಿ ರಹಿತ ಕುಟುಂಬಗಳಿಗೆ ಒಟ್ಟು 26 ಲಕ್ಷ ರೂ. ಸಹಾಯ ಧನದ ಚೆಕ್ ವಿತರಣಾ ಸಮಾರಂಭ ಶುಕ್ರವಾರ ಮಲಬಾರ್ ಗೋಲ್ಡ್ ಉಡುಪಿ ಮಳಿಗೆಯಲ್ಲಿ ನಡೆಯಿತು.

ಫಲಾನುಭವಿಗಳಿಗೆ ಚೆಕ್ ವಿತರಿಸಿದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಮಾತನಾಡಿ, ಮಲಬಾರ್ ಗೋಲ್ಡ್ ಆರ್ಥಿಕ ವ್ಯವಹಾರದ ಜೊತೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವುದು ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ. ಆರ್ಥಿಕ, ಶೈಕ್ಷಣಿಕ ಸಾಮಾಜಿಕವಾಗಿ ನೆರವು ನೀಡುವ ಮೂಲಕ ಈ ಸಂಸ್ಥೆ ಸಮಾಜಮುಖಿ ಕೆಲಸ ಮಾಡುತ್ತಿದೆ. ತಮ್ಮ ಲಾಭದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಕ್ಕೆ ವಿನಿಯೋಗಿಸುತ್ತಿ ರುವುದು ಶ್ಲಾಘನೀಯ ಎಂದು ತಿಳಿಸಿದರು. 

ಪರ್ಕಳ ದೇವಿನಗರದ ಬಳಕೆದಾರರ ವೇದಿಕೆಯ ಗೌರವಾಧ್ಯಕ್ಷ ಹಾಜಿ ಕೆ. ಅಬೂಬಕರ್ ಪರ್ಕಳ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಸಾಮಾಜಿ ಕಾರ್ಯಕರ್ತೆ ವಿನುತಾ ಕಿರಣ್, ಸಮಾಜ ಸೇವಕ ವಿಲ್ಫ್ರೇಡ್ ಡಿಸೋಜ, ಕಿದಿಯೂರು ಉದಯ ಕುಮಾರ್ ಫ್ಯಾಮಿಲಿ ಟ್ರಸ್ಟ್‌ನ ಉದಯ ಕುಮಾರ್ ಶೆಟ್ಟಿ, ಸಮಾಜ ಸೇವಕ ಲೀಲಾಧರ ಶೆಟ್ಟಿ, ಜಿಪಂ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಸುರೇಶ್ ಮರಕಲ, ಶಿಕ್ಷಕರಾದ ಮನು ಹಂದಾಡಿ, ಅರ್ಪಿತಾ ಶೆಟ್ಟಿ ಕಟಪಾಡಿ, ವಂದನಾ ರೈ ಕಾರ್ಕಳ, ನಿರ್ಮಲ್ ಕುಮಾರ್ ಹೆಗ್ಡೆ ಕಾಪು, ಚಿತ್ರ ಕಲಾವಿದ ಅಕ್ಷಯ್ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು. ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಜಿಆರ್‌ಎಂ ರಾಘವೇಂದ್ರ ನಾಯಕ್, ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ, ಶಾಖಾ ವ್ಯವಸ್ಥಾಪಕ ಪುರಂದರ ತಿಂಗಳಾಯ ಉಪಸ್ಥಿತರಿದ್ದರು. ಆರ್.ಜೆ.ಎರಾಲ್ ಸ್ವಾಗತಿಸಿ, ಕಾರ್ಯ ಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು