3:35 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಉಡುಪಿ: ಎ.ಆರ್.ಎಂ. ಮೋಟರ್ಸ್‌ ನೂತನ ಅತ್ಯಾಧುನಿಕ ಶೋರೂಂ ಮತ್ತು ಸರ್ವಿಸ್ ಸೆಂಟರ್ ಉದ್ಘಾಟನೆ

25/07/2024, 12:11

ಉಡುಪಿ(reporterkarnataka.com): ದೇಶದ ಪ್ರಖ್ಯಾತ ಅಟೋಮೊಬೈಲ್ ಕಂಪನಿ ಕಿಯಾ ಇಂಡಿಯಾ ಇದರ ಅಧಿಕೃತ ಡೀಲರ್ ಎ.ಆರ್.ಎಂ. ಮೋಟರ್ಸ್‌ರವರ ನೂತನ ಅತ್ಯಾಧುನಿಕ ಶೋರೂಂ ಮತ್ತು ಸರ್ವಿಸ್ ಸೆಂಟರ್ ಉಡುಪಿಯ ಉದ್ಯಾವರದಲ್ಲಿ ಇಂದು ಶುಭಾರಂಭಗೊಂಡಿತು.
ಮಾಂಡವಿ ಬಿಲ್ಡರ್ಸ್ ಎಂಡಿ ಡಾ. ಜೆರ್ರಿ ವಿನ್ಸೆಂಟ್ ಡಯಾಸ್‌ರವರು ರಿಬ್ಬನ್ ಕತ್ತರಿಸುವ ಮೂಲಕ ನೂತನ ಶೋರೂಂ ಮತ್ತು ಸರ್ವಿಸ್ ಸೆಂಟರ್‌ಗೆ ಚಾಲನೆ ನೀಡಿ ಇಲ್ಲಿರುವ ಅತ್ಯಾಧುನಿಕ ಸವಲತ್ತುಗಳನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿ ಶುಭಕೋರಿದರು.
ಕಿಯಾ ಇಂಡಿಯಾದ ರೀಜನಲ್ ಮೆನೇಜರ್ (ಸೇಲ್ಸ್) ನಿಖಿಲ್ ಕರಿಯಪ್ಪ ಮತ್ತು ರೀಜನಲ್ ಮೇನೆಜರ್ (ಸರ್ವೀಸ್) ಯುವರಾಜ್ ಎಸ್. ಅವರು ದೀಪ ಬೆಳಗಿಸಿ ಹಾರೈಸಿದರು. ಈ ಸಂದರ್ಭದಲ್ಲಿ ಎ.ಆರ್.ಎಂ ಮೋಟರ್ಸ್‌ನ ಎಂಡಿ ಆರೂರು ಗಣೇಶ್ ರಾವ್, ಡೈರೆಕ್ಟರ್ಸ್ ಆರೂರು ವರುಣ್ ರಾವ್ , ಆರೂರು ವಿಕ್ರಂ ರಾವ್, ಜನರಲ್ ಮ್ಯಾನೇಜರ್ (ಸರ್ವೀಸ್) ಶಶಿಕುಮಾರ್, ಜನರಲ್ ಮೆನೇಜರ್ (ಸೇಲ್ಸ್) ನಿತಿನ್ ಕೃಷ್ಣ, ಎಜಿಎಂ ಕನಕ ಕುಮಾರ್ ಮುಂತಾದವರು ಉಪಸ್ಥಿತರಿದ್ದರು. ಗ್ರಾಹಕರ ಅನುಕೂಲಕ್ಕಾಗಿ ಎಲ್ಲಾ ಆದಿತ್ಯವಾರವೂ ಶೋರೂಂ ಮತ್ತು ಸರ್ವಿಸ್ ಸೆಂಟರ್ ತೆರೆದಿರುತ್ತದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು