5:18 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಉಡುಪಿ: ಎ.ಆರ್.ಎಂ. ಮೋಟರ್ಸ್‌ ನೂತನ ಅತ್ಯಾಧುನಿಕ ಶೋರೂಂ ಮತ್ತು ಸರ್ವಿಸ್ ಸೆಂಟರ್ ಉದ್ಘಾಟನೆ

25/07/2024, 12:11

ಉಡುಪಿ(reporterkarnataka.com): ದೇಶದ ಪ್ರಖ್ಯಾತ ಅಟೋಮೊಬೈಲ್ ಕಂಪನಿ ಕಿಯಾ ಇಂಡಿಯಾ ಇದರ ಅಧಿಕೃತ ಡೀಲರ್ ಎ.ಆರ್.ಎಂ. ಮೋಟರ್ಸ್‌ರವರ ನೂತನ ಅತ್ಯಾಧುನಿಕ ಶೋರೂಂ ಮತ್ತು ಸರ್ವಿಸ್ ಸೆಂಟರ್ ಉಡುಪಿಯ ಉದ್ಯಾವರದಲ್ಲಿ ಇಂದು ಶುಭಾರಂಭಗೊಂಡಿತು.
ಮಾಂಡವಿ ಬಿಲ್ಡರ್ಸ್ ಎಂಡಿ ಡಾ. ಜೆರ್ರಿ ವಿನ್ಸೆಂಟ್ ಡಯಾಸ್‌ರವರು ರಿಬ್ಬನ್ ಕತ್ತರಿಸುವ ಮೂಲಕ ನೂತನ ಶೋರೂಂ ಮತ್ತು ಸರ್ವಿಸ್ ಸೆಂಟರ್‌ಗೆ ಚಾಲನೆ ನೀಡಿ ಇಲ್ಲಿರುವ ಅತ್ಯಾಧುನಿಕ ಸವಲತ್ತುಗಳನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿ ಶುಭಕೋರಿದರು.
ಕಿಯಾ ಇಂಡಿಯಾದ ರೀಜನಲ್ ಮೆನೇಜರ್ (ಸೇಲ್ಸ್) ನಿಖಿಲ್ ಕರಿಯಪ್ಪ ಮತ್ತು ರೀಜನಲ್ ಮೇನೆಜರ್ (ಸರ್ವೀಸ್) ಯುವರಾಜ್ ಎಸ್. ಅವರು ದೀಪ ಬೆಳಗಿಸಿ ಹಾರೈಸಿದರು. ಈ ಸಂದರ್ಭದಲ್ಲಿ ಎ.ಆರ್.ಎಂ ಮೋಟರ್ಸ್‌ನ ಎಂಡಿ ಆರೂರು ಗಣೇಶ್ ರಾವ್, ಡೈರೆಕ್ಟರ್ಸ್ ಆರೂರು ವರುಣ್ ರಾವ್ , ಆರೂರು ವಿಕ್ರಂ ರಾವ್, ಜನರಲ್ ಮ್ಯಾನೇಜರ್ (ಸರ್ವೀಸ್) ಶಶಿಕುಮಾರ್, ಜನರಲ್ ಮೆನೇಜರ್ (ಸೇಲ್ಸ್) ನಿತಿನ್ ಕೃಷ್ಣ, ಎಜಿಎಂ ಕನಕ ಕುಮಾರ್ ಮುಂತಾದವರು ಉಪಸ್ಥಿತರಿದ್ದರು. ಗ್ರಾಹಕರ ಅನುಕೂಲಕ್ಕಾಗಿ ಎಲ್ಲಾ ಆದಿತ್ಯವಾರವೂ ಶೋರೂಂ ಮತ್ತು ಸರ್ವಿಸ್ ಸೆಂಟರ್ ತೆರೆದಿರುತ್ತದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು