3:46 AM Friday27 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಉಡುಪಿ: ನಡು ರಸ್ತೆಯಲ್ಲೇ ಗ್ಯಾಂಗ್ ವಾರ್ ವೀಡಿಯೊ ವೈರಲ್; ಕೊನೆಗೂ ಎಚ್ಚೆತ್ತ ಪೊಲೀಸರಿಂದ ಇಬ್ಬರ ಬಂಧನ

25/05/2024, 12:09

ಉಡುಪಿ(reporterkarnataka.com): ಉಡುಪಿಯ ನಡು ರಸ್ತೆಯಲ್ಲಿ ಎರಡು ತಂಡಗಳ ನಡುವೆ ನಡೆದ ಗ್ಯಾಂಗ್ ವಾರ್ ಸಂಬಂಧಿಸಿದ ವೀಡಿಯೊ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.


ಉಡುಪಿ- ಮಣಿಪಾಲ ರೋಡಿನ ನಡು ರಸ್ತೆಯಲ್ಲಿಯೇ ಎರಡು ತಂಡಗಳ ನಡುವೆ ಕಾದಾಟ ನಡೆದಿತ್ತು. ಎರಡು ಕಾರುಗಳಲ್ಲಿ ಬಂದ ತಂಡ ಹೊಡೆದಾಟಕ್ಕೆ ನಿರತವಾಗಿತ್ತು. ಒಬ್ಬನಿಗೆ ಕಾರು ಡಿಕ್ಕಿ ಹೊಡೆದು ರಸ್ತೆಗೆ ಉರುಳಿ ಬಿದ್ದಿರುವುದು. ಬೆನ್ನಟ್ಟಿ ಓಡಿಸುವುದು ವೀಡಿಯೊದಲ್ಲಿ ಕಂಡು ಬರುತ್ತದೆ. ಮೇ 18ರಂದು ಈ ಘಟನೆ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಮೇ 20ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಉಡುಪಿ ನಗರ ಪೊಲೀಸರು ಆಶಿಕ್ ಮತ್ತು ರಕೀಬ್ ಎಂಬವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಕೃತ್ಯಕ್ಕೆ ಬಳಸಿದ ಎರಡು ಸ್ವಿಫ್ಟ್ ಕಾರುಗಳು ಮತ್ತು ಎರಡು ಬೈಕ್‌ಗಳು, ಒಂದು ತಲ್ವಾರ್ ಮತ್ತು ಒಂದು ಡ್ರ್ಯಾಗರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗ್ಯಾಂಗ್ ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು