2:00 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Udupi | ರಾಷ್ಟ್ರೀಯ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌: ಉಡುಪಿಯ ಮಾನ್ಸಿಗೆ ಕಂಚು; ಸಚಿವೆ ಹೆಬ್ಬಾಳ್ಕರ್ ಶ್ಲಾಘನೆ

13/08/2025, 19:10

ಉಡುಪಿ(reporterkarnataka.com): ಉತ್ತರ ಪ್ರದೇಶದ ಗ್ರೇಟರ್‌ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಉಡುಪಿ ಜಿಲ್ಲೆಯ ಮಾನ್ಸಿ ಜೆ ಸುವರ್ಣ ಅವರು ಕಂಚಿನ ಪದಕ ಗೆದ್ದಿದ್ದು, ಅವರ ಸಾಧನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ಲಾಘಿಸಿದ್ದಾರೆ.


ಮೀನುಗಾರಿಕೆಯಲ್ಲಿ ತೊಡಗಿರುವ ಮಲ್ಪೆಯ ಮಾಲತಿ ಹಾಗೂ ಜಗದೀಶ್ ಸುವರ್ಣ ದಂಪತಿ ಪುತ್ರಿ ಮಾನ್ಸಿ ಗೆದ್ದಿರುವ ಕಂಚಿನ ಪದಕ ರಾಜ್ಯದ ಇತರ ಬಾಕ್ಸರ್‌ಗಳಿಗೆ ಸ್ಫೂರ್ತಿಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಬಾಕ್ಸಿಂಗ್‌ ಕ್ರೀಡೆ ವಿರಳ. ಈ ಕ್ರೀಡೆ ಮತ್ತಷ್ಟು ಬೆಳೆಯಲಿ. ಕರಾವಳಿಯ ಮಕ್ಕಳು ಬಾಕ್ಸಿಂಗ್‌ನಲ್ಲಿ ಮಿಂಚಲಿ ಎಂದು ಸಚಿವರು ಹಾರೈಸಿದ್ದಾರೆ.
ಮಾನ್ಸಿ ಸುವರ್ಣ ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಹೆಚ್ಚು ಪದಕಗಳನ್ನು ಜಯಿಸಲಿ, ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತರಲಿ. ಆಕೆಯ‌ ಸಾಧನೆಗೆ ನಮ್ಮ ಸರ್ಕಾರ ಸದಾ ಬೆನ್ನೆಲುಬು ಆಗಿ ನಿಲ್ಲಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು