9:53 AM Thursday24 - October 2024
ಬ್ರೇಕಿಂಗ್ ನ್ಯೂಸ್
ವಯನಾಡು ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ; ಬೃಹತ್… ಪಂಚಾಯತ್ ಪಾಲಿಟಿಕ್ಸ್: ಅಧಿಕಾರ, ಅನುದಾನದ ಆಸೆಗೆ ಗ್ರಾಪಂ ಸದಸ್ಯೆಯ ಪತಿಯ ಭೀಕರ ಹತ್ಯೆ:… ಮೂಡಿಗೆರೆ ರೈತ ಭವನದಲ್ಲಿ ಅ.25ರಂದು ವೈವಿಧ್ಯಮಯ ‘ಮಲೆನಾಡು ಹಬ್ಬ’ ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ಉಡುಪಿ: ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಕಳವು

07/02/2022, 22:32

ಉಡುಪಿ(reporterkarnataka.com): ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಕಳ್ಳತನ ಮಾಡಿರುವ ಘಟನೆ ಫೆ‌.5ರಂದು ನಡೆದಿದೆ. 

ಈ ಬಗ್ಗೆ ಉಡುಪಿ ಕಲ್ಯಾಣಪುರ ಮೂಡುಬೆಟ್ಟು ನಿವಾಸಿ ರಾಜು ಅಂಚನ್‌ ಪೊಲೀಸರಿಗೆ ದೂರು ನೀಡಿದ್ದಾರೆ. ರಾಜು ಅಂಚನ್ ಎಂದಿನಂತೆ ಫೆ.5ರಂದು ಬೆಳಿಗ್ಗೆ ನ್ಯಾಯಾಲಯದಲ್ಲಿ ಕರ್ತವ್ಯಕ್ಕೆ ಹೋಗಿದ್ದು, ತನ್ನ ಸ್ಕೂಟರ್‌ ನ್ನು ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಿದ್ದರು. ಸಂಜೆ ಕರ್ತವ್ಯ ಮುಗಿಸಿ ಬಂದು ನೋಡುವಾಗ ನಿಲ್ಲಿಸಿದ್ದ ಜಾಗದಲ್ಲಿ ಸ್ಕೂಟರ್‌ ಇರಲಿಲ್ಲ. ಯಾರೋ ಕಳ್ಳರು ಸ್ಕೂಟರ್ ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಸ್ಕೂಟರ್‌ನ ಅಂದಾಜು ಮೌಲ್ಯ 35 ಸಾವಿರ ಆಗಿದೆ‌. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು