1:35 AM Monday16 - June 2025
ಬ್ರೇಕಿಂಗ್ ನ್ಯೂಸ್
Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ…

ಇತ್ತೀಚಿನ ಸುದ್ದಿ

Udupi | ಒಣ ಮೀನು ಮಾರಿ ಮನೆ ಕಟ್ಟಲು ಕೂಡಿಟ್ಟ ಹಣದಿಂದ ಫುಡ್ ಕಿಟ್ ವಿತರಣೆ: ಲಕ್ಷ್ಮೀ ಹೃದಯ ಶ್ರೀಮಂತಿಕೆಗೆ ಡಿಕೆಶಿ ಫಿದಾ

07/07/2021, 10:38

ಉಡುಪಿ(reporterkarnataka news):

ಮಲ್ಪೆಯ ತೀರಾ ಬಡ ಕುಟುಂಬದಿಂದ ಬಂದಿರುವ ಲಕ್ಷ್ಮೀ ಅವರು ಹಸಿ ಮೀನು ಖರೀದಿಸಿ, ಅದನ್ನು ಒಣಮೀನಾಗಿಸಿ ಮಾರಾಟ ಮಾಡಿ ಜೀವನ ನಡೆಸುತ್ತಿರುವವರು. ಜೀವನ ಸಂಜೆಯಲ್ಲಾದರೂ ಒಂದು ಸ್ವಂತ ಸೂರು ಹೊಂದಬೇಕೆಂದು ಒಣ ಮೀನು ಮಾರಾಟದಲ್ಲಿ 40 ಸಾವಿರ ರುಪಾಯಿ, ಉಳಿತಾಯ ಮಾಡಿಟ್ಟುಕೊಂಡಿದ್ದರು.

ಮೊದಲಿಂದಲೂ ಕಂಡವರ ಸಮಸ್ಯೆಗೆ ಕರಗುವ, ಮಮ್ಮುಲ ಮರುಗುವ ಗುಣ ರೂಢಿಸಿಕೊಂಡಿದ್ದ ಮಾತೃ ಹೃದಯದ ಲಕ್ಷ್ಮೀ ಅವರಿಗೆ ಕೊರೊನಾ ಸಂದರ್ಭದಲ್ಲಿ ತಮಗಿಂತಲೂ ಬಡವರು ಅನ್ನ, ಆಹಾರಕ್ಕಾಗಿ ಪರಿತಪಿಸುತ್ತಿರುವುದನ್ನು ನೋಡಿ, ಸಹಿಸಿಕೊಳ್ಳಲು ಆಗಲಿಲ್ಲ.

ತಡಮಾಡದೇ, ಮನೆ ಕಟ್ಟಲೆಂದು ತಾವು ಕೂಡಿಟ್ಟಿದ್ದ 40 ಸಾವಿರ ರುಪಾಯಿಯಲ್ಲಿ ಅಕ್ಕಿ, ಬೇಳೆ, ಸಕ್ಕರೆ, ಎಣ್ಣೆ ಖರೀದಿಸಿ ಅದನ್ನು ಬಡವರಿಗೆ ಉಚಿತವಾಗಿ ಹಂಚಿಬಿಟ್ಟರು. ಆ ಮೂಲಕ ಹೃದಯ ಶ್ರೀಮಂತಿಕೆ ಮೆರೆದರು. ಮತ್ತೊಬ್ಬರ ಕಷ್ಟಕ್ಕೆ ನೆರವಾಗಲು ಹಣವಂತಿಕೆಗೂ ಮಿಗಿಲಾಗಿ ಗುಣವಂತಿಕೆ ಬೇಕೆಂಬುದನ್ನು ಸಾರಿದರು.

ತದನಂತರ ಈ ವಿಷಯ ಮಾಧ್ಯಮಗಳ ಮೂಲಕ ತಿಳಿದು ಸ್ಥಳೀಯ ಕಾಂಗ್ರೆಸ್ ಮುಖಂಡರು, ಆಕೆ ಆಹಾರ ಕಿಟ್ ಗಳ ವಿತರಣೆಗೆ ವಿನಿಯೋಗಿಸಿದ್ದ 40 ಸಾವಿರ ರೂಪಾಯಿಯನ್ನು ಮರಳಿಸಿದರು.

ಮಲ್ಪೆ ಬಂದರಿಗೆ ಇಂದು ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ವಿಷಯ ತಿಳಿದ ಡಿ.ಕೆ. ಶಿವಕುಮಾರ್ ಅವರು ಲಕ್ಷ್ಮೀ ಅವರನ್ನು ಭೇಟಿ ಮಾಡಿ, ಆಕೆಯ ಮಾತೃ ವಾತ್ಸಲ್ಯವನ್ನು ಮನತುಂಬಿ ಕೊಂಡಾಡಿದರು. ನಿಮ್ಮಂತಹ ತಾಯಿ ಮಮತೆಯ ಸಂತತಿ ನೂರ್ಮಡಿಯಾಗಲಿ, ಮನುಕುಲಕ್ಕೆ ಮಾದರಿಯಾಗಲಿ ಎಂದು ಬಯಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು