4:33 AM Wednesday6 - August 2025
ಬ್ರೇಕಿಂಗ್ ನ್ಯೂಸ್
ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ…

ಇತ್ತೀಚಿನ ಸುದ್ದಿ

Udupi | ಒಣ ಮೀನು ಮಾರಿ ಮನೆ ಕಟ್ಟಲು ಕೂಡಿಟ್ಟ ಹಣದಿಂದ ಫುಡ್ ಕಿಟ್ ವಿತರಣೆ: ಲಕ್ಷ್ಮೀ ಹೃದಯ ಶ್ರೀಮಂತಿಕೆಗೆ ಡಿಕೆಶಿ ಫಿದಾ

07/07/2021, 10:38

ಉಡುಪಿ(reporterkarnataka news):

ಮಲ್ಪೆಯ ತೀರಾ ಬಡ ಕುಟುಂಬದಿಂದ ಬಂದಿರುವ ಲಕ್ಷ್ಮೀ ಅವರು ಹಸಿ ಮೀನು ಖರೀದಿಸಿ, ಅದನ್ನು ಒಣಮೀನಾಗಿಸಿ ಮಾರಾಟ ಮಾಡಿ ಜೀವನ ನಡೆಸುತ್ತಿರುವವರು. ಜೀವನ ಸಂಜೆಯಲ್ಲಾದರೂ ಒಂದು ಸ್ವಂತ ಸೂರು ಹೊಂದಬೇಕೆಂದು ಒಣ ಮೀನು ಮಾರಾಟದಲ್ಲಿ 40 ಸಾವಿರ ರುಪಾಯಿ, ಉಳಿತಾಯ ಮಾಡಿಟ್ಟುಕೊಂಡಿದ್ದರು.

ಮೊದಲಿಂದಲೂ ಕಂಡವರ ಸಮಸ್ಯೆಗೆ ಕರಗುವ, ಮಮ್ಮುಲ ಮರುಗುವ ಗುಣ ರೂಢಿಸಿಕೊಂಡಿದ್ದ ಮಾತೃ ಹೃದಯದ ಲಕ್ಷ್ಮೀ ಅವರಿಗೆ ಕೊರೊನಾ ಸಂದರ್ಭದಲ್ಲಿ ತಮಗಿಂತಲೂ ಬಡವರು ಅನ್ನ, ಆಹಾರಕ್ಕಾಗಿ ಪರಿತಪಿಸುತ್ತಿರುವುದನ್ನು ನೋಡಿ, ಸಹಿಸಿಕೊಳ್ಳಲು ಆಗಲಿಲ್ಲ.

ತಡಮಾಡದೇ, ಮನೆ ಕಟ್ಟಲೆಂದು ತಾವು ಕೂಡಿಟ್ಟಿದ್ದ 40 ಸಾವಿರ ರುಪಾಯಿಯಲ್ಲಿ ಅಕ್ಕಿ, ಬೇಳೆ, ಸಕ್ಕರೆ, ಎಣ್ಣೆ ಖರೀದಿಸಿ ಅದನ್ನು ಬಡವರಿಗೆ ಉಚಿತವಾಗಿ ಹಂಚಿಬಿಟ್ಟರು. ಆ ಮೂಲಕ ಹೃದಯ ಶ್ರೀಮಂತಿಕೆ ಮೆರೆದರು. ಮತ್ತೊಬ್ಬರ ಕಷ್ಟಕ್ಕೆ ನೆರವಾಗಲು ಹಣವಂತಿಕೆಗೂ ಮಿಗಿಲಾಗಿ ಗುಣವಂತಿಕೆ ಬೇಕೆಂಬುದನ್ನು ಸಾರಿದರು.

ತದನಂತರ ಈ ವಿಷಯ ಮಾಧ್ಯಮಗಳ ಮೂಲಕ ತಿಳಿದು ಸ್ಥಳೀಯ ಕಾಂಗ್ರೆಸ್ ಮುಖಂಡರು, ಆಕೆ ಆಹಾರ ಕಿಟ್ ಗಳ ವಿತರಣೆಗೆ ವಿನಿಯೋಗಿಸಿದ್ದ 40 ಸಾವಿರ ರೂಪಾಯಿಯನ್ನು ಮರಳಿಸಿದರು.

ಮಲ್ಪೆ ಬಂದರಿಗೆ ಇಂದು ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ವಿಷಯ ತಿಳಿದ ಡಿ.ಕೆ. ಶಿವಕುಮಾರ್ ಅವರು ಲಕ್ಷ್ಮೀ ಅವರನ್ನು ಭೇಟಿ ಮಾಡಿ, ಆಕೆಯ ಮಾತೃ ವಾತ್ಸಲ್ಯವನ್ನು ಮನತುಂಬಿ ಕೊಂಡಾಡಿದರು. ನಿಮ್ಮಂತಹ ತಾಯಿ ಮಮತೆಯ ಸಂತತಿ ನೂರ್ಮಡಿಯಾಗಲಿ, ಮನುಕುಲಕ್ಕೆ ಮಾದರಿಯಾಗಲಿ ಎಂದು ಬಯಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು