4:13 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

Udupi | ಒಣ ಮೀನು ಮಾರಿ ಮನೆ ಕಟ್ಟಲು ಕೂಡಿಟ್ಟ ಹಣದಿಂದ ಫುಡ್ ಕಿಟ್ ವಿತರಣೆ: ಲಕ್ಷ್ಮೀ ಹೃದಯ ಶ್ರೀಮಂತಿಕೆಗೆ ಡಿಕೆಶಿ ಫಿದಾ

07/07/2021, 10:38

ಉಡುಪಿ(reporterkarnataka news):

ಮಲ್ಪೆಯ ತೀರಾ ಬಡ ಕುಟುಂಬದಿಂದ ಬಂದಿರುವ ಲಕ್ಷ್ಮೀ ಅವರು ಹಸಿ ಮೀನು ಖರೀದಿಸಿ, ಅದನ್ನು ಒಣಮೀನಾಗಿಸಿ ಮಾರಾಟ ಮಾಡಿ ಜೀವನ ನಡೆಸುತ್ತಿರುವವರು. ಜೀವನ ಸಂಜೆಯಲ್ಲಾದರೂ ಒಂದು ಸ್ವಂತ ಸೂರು ಹೊಂದಬೇಕೆಂದು ಒಣ ಮೀನು ಮಾರಾಟದಲ್ಲಿ 40 ಸಾವಿರ ರುಪಾಯಿ, ಉಳಿತಾಯ ಮಾಡಿಟ್ಟುಕೊಂಡಿದ್ದರು.

ಮೊದಲಿಂದಲೂ ಕಂಡವರ ಸಮಸ್ಯೆಗೆ ಕರಗುವ, ಮಮ್ಮುಲ ಮರುಗುವ ಗುಣ ರೂಢಿಸಿಕೊಂಡಿದ್ದ ಮಾತೃ ಹೃದಯದ ಲಕ್ಷ್ಮೀ ಅವರಿಗೆ ಕೊರೊನಾ ಸಂದರ್ಭದಲ್ಲಿ ತಮಗಿಂತಲೂ ಬಡವರು ಅನ್ನ, ಆಹಾರಕ್ಕಾಗಿ ಪರಿತಪಿಸುತ್ತಿರುವುದನ್ನು ನೋಡಿ, ಸಹಿಸಿಕೊಳ್ಳಲು ಆಗಲಿಲ್ಲ.

ತಡಮಾಡದೇ, ಮನೆ ಕಟ್ಟಲೆಂದು ತಾವು ಕೂಡಿಟ್ಟಿದ್ದ 40 ಸಾವಿರ ರುಪಾಯಿಯಲ್ಲಿ ಅಕ್ಕಿ, ಬೇಳೆ, ಸಕ್ಕರೆ, ಎಣ್ಣೆ ಖರೀದಿಸಿ ಅದನ್ನು ಬಡವರಿಗೆ ಉಚಿತವಾಗಿ ಹಂಚಿಬಿಟ್ಟರು. ಆ ಮೂಲಕ ಹೃದಯ ಶ್ರೀಮಂತಿಕೆ ಮೆರೆದರು. ಮತ್ತೊಬ್ಬರ ಕಷ್ಟಕ್ಕೆ ನೆರವಾಗಲು ಹಣವಂತಿಕೆಗೂ ಮಿಗಿಲಾಗಿ ಗುಣವಂತಿಕೆ ಬೇಕೆಂಬುದನ್ನು ಸಾರಿದರು.

ತದನಂತರ ಈ ವಿಷಯ ಮಾಧ್ಯಮಗಳ ಮೂಲಕ ತಿಳಿದು ಸ್ಥಳೀಯ ಕಾಂಗ್ರೆಸ್ ಮುಖಂಡರು, ಆಕೆ ಆಹಾರ ಕಿಟ್ ಗಳ ವಿತರಣೆಗೆ ವಿನಿಯೋಗಿಸಿದ್ದ 40 ಸಾವಿರ ರೂಪಾಯಿಯನ್ನು ಮರಳಿಸಿದರು.

ಮಲ್ಪೆ ಬಂದರಿಗೆ ಇಂದು ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ವಿಷಯ ತಿಳಿದ ಡಿ.ಕೆ. ಶಿವಕುಮಾರ್ ಅವರು ಲಕ್ಷ್ಮೀ ಅವರನ್ನು ಭೇಟಿ ಮಾಡಿ, ಆಕೆಯ ಮಾತೃ ವಾತ್ಸಲ್ಯವನ್ನು ಮನತುಂಬಿ ಕೊಂಡಾಡಿದರು. ನಿಮ್ಮಂತಹ ತಾಯಿ ಮಮತೆಯ ಸಂತತಿ ನೂರ್ಮಡಿಯಾಗಲಿ, ಮನುಕುಲಕ್ಕೆ ಮಾದರಿಯಾಗಲಿ ಎಂದು ಬಯಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು