11:43 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

Udupi | ಒಣ ಮೀನು ಮಾರಿ ಮನೆ ಕಟ್ಟಲು ಕೂಡಿಟ್ಟ ಹಣದಿಂದ ಫುಡ್ ಕಿಟ್ ವಿತರಣೆ: ಲಕ್ಷ್ಮೀ ಹೃದಯ ಶ್ರೀಮಂತಿಕೆಗೆ ಡಿಕೆಶಿ ಫಿದಾ

07/07/2021, 10:38

ಉಡುಪಿ(reporterkarnataka news):

ಮಲ್ಪೆಯ ತೀರಾ ಬಡ ಕುಟುಂಬದಿಂದ ಬಂದಿರುವ ಲಕ್ಷ್ಮೀ ಅವರು ಹಸಿ ಮೀನು ಖರೀದಿಸಿ, ಅದನ್ನು ಒಣಮೀನಾಗಿಸಿ ಮಾರಾಟ ಮಾಡಿ ಜೀವನ ನಡೆಸುತ್ತಿರುವವರು. ಜೀವನ ಸಂಜೆಯಲ್ಲಾದರೂ ಒಂದು ಸ್ವಂತ ಸೂರು ಹೊಂದಬೇಕೆಂದು ಒಣ ಮೀನು ಮಾರಾಟದಲ್ಲಿ 40 ಸಾವಿರ ರುಪಾಯಿ, ಉಳಿತಾಯ ಮಾಡಿಟ್ಟುಕೊಂಡಿದ್ದರು.

ಮೊದಲಿಂದಲೂ ಕಂಡವರ ಸಮಸ್ಯೆಗೆ ಕರಗುವ, ಮಮ್ಮುಲ ಮರುಗುವ ಗುಣ ರೂಢಿಸಿಕೊಂಡಿದ್ದ ಮಾತೃ ಹೃದಯದ ಲಕ್ಷ್ಮೀ ಅವರಿಗೆ ಕೊರೊನಾ ಸಂದರ್ಭದಲ್ಲಿ ತಮಗಿಂತಲೂ ಬಡವರು ಅನ್ನ, ಆಹಾರಕ್ಕಾಗಿ ಪರಿತಪಿಸುತ್ತಿರುವುದನ್ನು ನೋಡಿ, ಸಹಿಸಿಕೊಳ್ಳಲು ಆಗಲಿಲ್ಲ.

ತಡಮಾಡದೇ, ಮನೆ ಕಟ್ಟಲೆಂದು ತಾವು ಕೂಡಿಟ್ಟಿದ್ದ 40 ಸಾವಿರ ರುಪಾಯಿಯಲ್ಲಿ ಅಕ್ಕಿ, ಬೇಳೆ, ಸಕ್ಕರೆ, ಎಣ್ಣೆ ಖರೀದಿಸಿ ಅದನ್ನು ಬಡವರಿಗೆ ಉಚಿತವಾಗಿ ಹಂಚಿಬಿಟ್ಟರು. ಆ ಮೂಲಕ ಹೃದಯ ಶ್ರೀಮಂತಿಕೆ ಮೆರೆದರು. ಮತ್ತೊಬ್ಬರ ಕಷ್ಟಕ್ಕೆ ನೆರವಾಗಲು ಹಣವಂತಿಕೆಗೂ ಮಿಗಿಲಾಗಿ ಗುಣವಂತಿಕೆ ಬೇಕೆಂಬುದನ್ನು ಸಾರಿದರು.

ತದನಂತರ ಈ ವಿಷಯ ಮಾಧ್ಯಮಗಳ ಮೂಲಕ ತಿಳಿದು ಸ್ಥಳೀಯ ಕಾಂಗ್ರೆಸ್ ಮುಖಂಡರು, ಆಕೆ ಆಹಾರ ಕಿಟ್ ಗಳ ವಿತರಣೆಗೆ ವಿನಿಯೋಗಿಸಿದ್ದ 40 ಸಾವಿರ ರೂಪಾಯಿಯನ್ನು ಮರಳಿಸಿದರು.

ಮಲ್ಪೆ ಬಂದರಿಗೆ ಇಂದು ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ವಿಷಯ ತಿಳಿದ ಡಿ.ಕೆ. ಶಿವಕುಮಾರ್ ಅವರು ಲಕ್ಷ್ಮೀ ಅವರನ್ನು ಭೇಟಿ ಮಾಡಿ, ಆಕೆಯ ಮಾತೃ ವಾತ್ಸಲ್ಯವನ್ನು ಮನತುಂಬಿ ಕೊಂಡಾಡಿದರು. ನಿಮ್ಮಂತಹ ತಾಯಿ ಮಮತೆಯ ಸಂತತಿ ನೂರ್ಮಡಿಯಾಗಲಿ, ಮನುಕುಲಕ್ಕೆ ಮಾದರಿಯಾಗಲಿ ಎಂದು ಬಯಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು