7:40 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಉಡುಪಿ: ಒಂದೇ ಕುಟುಂಬದ 4 ಮಂದಿಯ ಹತ್ಯೆ; ಒಬ್ಬಳ ಮೇಲಿನ ದ್ವೇಷಕ್ಕೆ ಹಂತಕ ನಾಲ್ವರು ಬಲಿ ಪಡೆದನೇ?

13/11/2023, 19:41

ಉಡುಪಿ(reporterkarnataka.com): ಇಡೀ ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿಯ ಸುಳಿವು ಪೊಲೀಸರಿಗೆ ಲಭ್ಯವಾಗಿದ್ದು, ಒಬ್ಬಳ ಕೊಲೆ ನಡೆಸುವುದಕ್ಕಾಗಿ ಜತೆಗೆ ಮತ್ತೆ ಮೂವರ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದಿತ್ತು. ತಾಯಿ ಹಸೀನಾ ಹಾಗೂ ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್ (21) ಮತ್ತು ಅಸೀಮ್(14) ಎಂಬವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹಂತಕನು
ಒಬ್ಬಳ ಮೇಲಿನ ದ್ವೇಷದಿಂದ ಆಕೆಯನ್ನು ಕೊಲ್ಲಲ್ಲು ಬಂದರೂ ಸಾಕ್ಷ್ಮಿ ಉಳಿಯದಂತೆ ಮತ್ತೆ ಮೂವರನ್ನು ಕೊಂದಿದ್ದಾನೆ ಎನ್ನಲಾಗಿದೆ. ವೃದ್ಧೆಗೂ ಚಾಕು ಇರಿದರೂ ಅವರು ಓಡಿ ತಪ್ಪಿಸಿಕೊಂಡು ಬಚಾವ್ ಆಗಿದ್ದರು.
ಏರ್ ಇಂಡಿಯಾ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಅಫ್ನಾನ್ ಮೇಲಿನ ದ್ವೇಷಕ್ಕೆ ದುಷ್ಕರ್ಮಿ ಇನ್ನೂ ಮೂವರನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಹಂತಕನನ್ನು ಘಟನೆ ನಡೆದ ಮನೆಗೆ ಕರೆತಂದ ಆಟೋ ಡ್ರೈವರ್ ಈಗಾಗಲೇ ಕೊಲೆಗಡುಕನ ಕುರಿತು ಮಾಹಿತಿ ನೀಡಿದ್ದಾರೆ. ಪಾತಕಿಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು