6:10 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;…

ಇತ್ತೀಚಿನ ಸುದ್ದಿ

ಉಡುಪಿ: ಒಂದೇ ಕುಟುಂಬದ 4 ಮಂದಿಯ ಹತ್ಯೆ; ಒಬ್ಬಳ ಮೇಲಿನ ದ್ವೇಷಕ್ಕೆ ಹಂತಕ ನಾಲ್ವರು ಬಲಿ ಪಡೆದನೇ?

13/11/2023, 19:41

ಉಡುಪಿ(reporterkarnataka.com): ಇಡೀ ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿಯ ಸುಳಿವು ಪೊಲೀಸರಿಗೆ ಲಭ್ಯವಾಗಿದ್ದು, ಒಬ್ಬಳ ಕೊಲೆ ನಡೆಸುವುದಕ್ಕಾಗಿ ಜತೆಗೆ ಮತ್ತೆ ಮೂವರ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದಿತ್ತು. ತಾಯಿ ಹಸೀನಾ ಹಾಗೂ ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್ (21) ಮತ್ತು ಅಸೀಮ್(14) ಎಂಬವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹಂತಕನು
ಒಬ್ಬಳ ಮೇಲಿನ ದ್ವೇಷದಿಂದ ಆಕೆಯನ್ನು ಕೊಲ್ಲಲ್ಲು ಬಂದರೂ ಸಾಕ್ಷ್ಮಿ ಉಳಿಯದಂತೆ ಮತ್ತೆ ಮೂವರನ್ನು ಕೊಂದಿದ್ದಾನೆ ಎನ್ನಲಾಗಿದೆ. ವೃದ್ಧೆಗೂ ಚಾಕು ಇರಿದರೂ ಅವರು ಓಡಿ ತಪ್ಪಿಸಿಕೊಂಡು ಬಚಾವ್ ಆಗಿದ್ದರು.
ಏರ್ ಇಂಡಿಯಾ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಅಫ್ನಾನ್ ಮೇಲಿನ ದ್ವೇಷಕ್ಕೆ ದುಷ್ಕರ್ಮಿ ಇನ್ನೂ ಮೂವರನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಹಂತಕನನ್ನು ಘಟನೆ ನಡೆದ ಮನೆಗೆ ಕರೆತಂದ ಆಟೋ ಡ್ರೈವರ್ ಈಗಾಗಲೇ ಕೊಲೆಗಡುಕನ ಕುರಿತು ಮಾಹಿತಿ ನೀಡಿದ್ದಾರೆ. ಪಾತಕಿಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು