4:53 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಉಡುಪಿ: ಒಂದೇ ಕುಟುಂಬದ 4 ಮಂದಿಯ ಹತ್ಯೆ; ಒಬ್ಬಳ ಮೇಲಿನ ದ್ವೇಷಕ್ಕೆ ಹಂತಕ ನಾಲ್ವರು ಬಲಿ ಪಡೆದನೇ?

13/11/2023, 19:41

ಉಡುಪಿ(reporterkarnataka.com): ಇಡೀ ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿಯ ಸುಳಿವು ಪೊಲೀಸರಿಗೆ ಲಭ್ಯವಾಗಿದ್ದು, ಒಬ್ಬಳ ಕೊಲೆ ನಡೆಸುವುದಕ್ಕಾಗಿ ಜತೆಗೆ ಮತ್ತೆ ಮೂವರ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದಿತ್ತು. ತಾಯಿ ಹಸೀನಾ ಹಾಗೂ ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್ (21) ಮತ್ತು ಅಸೀಮ್(14) ಎಂಬವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹಂತಕನು
ಒಬ್ಬಳ ಮೇಲಿನ ದ್ವೇಷದಿಂದ ಆಕೆಯನ್ನು ಕೊಲ್ಲಲ್ಲು ಬಂದರೂ ಸಾಕ್ಷ್ಮಿ ಉಳಿಯದಂತೆ ಮತ್ತೆ ಮೂವರನ್ನು ಕೊಂದಿದ್ದಾನೆ ಎನ್ನಲಾಗಿದೆ. ವೃದ್ಧೆಗೂ ಚಾಕು ಇರಿದರೂ ಅವರು ಓಡಿ ತಪ್ಪಿಸಿಕೊಂಡು ಬಚಾವ್ ಆಗಿದ್ದರು.
ಏರ್ ಇಂಡಿಯಾ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಅಫ್ನಾನ್ ಮೇಲಿನ ದ್ವೇಷಕ್ಕೆ ದುಷ್ಕರ್ಮಿ ಇನ್ನೂ ಮೂವರನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಹಂತಕನನ್ನು ಘಟನೆ ನಡೆದ ಮನೆಗೆ ಕರೆತಂದ ಆಟೋ ಡ್ರೈವರ್ ಈಗಾಗಲೇ ಕೊಲೆಗಡುಕನ ಕುರಿತು ಮಾಹಿತಿ ನೀಡಿದ್ದಾರೆ. ಪಾತಕಿಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು