5:17 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಕೊನೆಗೂ ಯಕ್ಷಗಾನಕ್ಕೆ ಪ್ರಾತಿನಿಧ್ಯ; ಇಬ್ಬರು  ಲಿಸ್ಟ್ ನಿಂದ ಔಟ್

31/10/2021, 23:10

ಉಡುಪಿ(reporterkarnataka.com): ಅ.30ರಂದು ಜಿಲ್ಲಾಡಳಿತ ಪ್ರಕಟಿಸಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾದ 35 ಮಂದಿಯ ಪಟ್ಟಿಯಲ್ಲಿ ಯಕ್ಷಗಾನ ಹಾಗೂ ಕೃಷಿ ಕ್ಷೇತ್ರದಲ್ಲಿ ಯಾರೊಬ್ಬರನ್ನೂ ಪರಿಗಣಿಸಿಲ್ಲ ಎಂದು

ಸಾಮಾಜಿಕ ಜಾಲತಾಣ ಗಳಲ್ಲಿ ತೀವ್ರ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರಿಂದ ಜಿಲ್ಲಾಡಳಿತ ತರಾತುರಿಯಲ್ಲಿ ಪ್ರಶಸ್ತಿ ಪಟ್ಟಿಯನ್ನು ಪರಿಷ್ಕರಿಸಿ ಪ್ರಕಟಿಸಿದೆ.

ಈ ಹಿಂದಿನ ಪಟ್ಟಿಯಲ್ಲಿದ್ದ ಇಬ್ಬರನ್ನು ಕೈಬಿಟ್ಟು ಯಕ್ಷಗಾನ ಸಹಿತ ಎರಡು ಕ್ಷೇತ್ರಗಳಿಗೆ ಇಬ್ಬರನ್ನು ಹೊಸದಾಗಿ ಸೇರ್ಪಡೆಗೊಳಿಸಿ ಒಟ್ಟು 35 ಮಂದಿಯ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಯಕ್ಷಗಾನ ಕ್ಷೇತ್ರದಲ್ಲಿ ಶ್ರೀಧರ್ ಗಾಣಿಗ ಉಪ್ಪುಂದ ಹಾಗೂ ಸಂಕೀರ್ಣ ಕ್ಷೇತ್ರದಲ್ಲಿ ಮಣೂರು ಮಧುಸೂದನ್ ಬಾಯರಿ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಹಿಂದಿನ ಪಟ್ಟಿಯಲ್ಲಿದ್ದ ಯೋಗ ಕ್ಷೇತ್ರದ ಕೆ.ನರೇಂದ್ರ ಕಾಮತ್ ಪೆರ್ವಾಜೆ ಹಾಗೂ ಸಮಾಜ ಸೇವೆ ಕ್ಷೇತ್ರದ ನಾಗರಾಜ್ ಪುತ್ರನ್ ಕೋಟತಟ್ಟು ಅವರ ಹೆಸರನ್ನು ಕೈಬಿಡಲಾಗಿದೆ. ಮೊದಲ ಪಟ್ಟಿಯಲ್ಲಿದ್ದ ಮಹಾಬಲ ಸುವರ್ಣ ಹಾಗೂ ಪೂವಪ್ಪ ಪೂಜಾರಿ ಅವರಿಗೆ ದೈವರಾಧನೆ ಕ್ಷೇತ್ರವನ್ನು ಕೈಬಿಟ್ಟು ಸಂಕೀರ್ಣ ಕ್ಷೇತ್ರ ಎಂಬುದಾಗಿ ಬದಲಾಯಿಸಲಾಗಿದೆ. ಅದೇ ರೀತಿ ಕುಷ್ಟ ಕೊರಗ ಅವರಿಗೆ ಕಲೆಯ ಬದಲು ಕರಕುಶಲ ಕ್ಷೇತ್ರದಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು