12:18 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಕೊನೆಗೂ ಯಕ್ಷಗಾನಕ್ಕೆ ಪ್ರಾತಿನಿಧ್ಯ; ಇಬ್ಬರು  ಲಿಸ್ಟ್ ನಿಂದ ಔಟ್

31/10/2021, 23:10

ಉಡುಪಿ(reporterkarnataka.com): ಅ.30ರಂದು ಜಿಲ್ಲಾಡಳಿತ ಪ್ರಕಟಿಸಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾದ 35 ಮಂದಿಯ ಪಟ್ಟಿಯಲ್ಲಿ ಯಕ್ಷಗಾನ ಹಾಗೂ ಕೃಷಿ ಕ್ಷೇತ್ರದಲ್ಲಿ ಯಾರೊಬ್ಬರನ್ನೂ ಪರಿಗಣಿಸಿಲ್ಲ ಎಂದು

ಸಾಮಾಜಿಕ ಜಾಲತಾಣ ಗಳಲ್ಲಿ ತೀವ್ರ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರಿಂದ ಜಿಲ್ಲಾಡಳಿತ ತರಾತುರಿಯಲ್ಲಿ ಪ್ರಶಸ್ತಿ ಪಟ್ಟಿಯನ್ನು ಪರಿಷ್ಕರಿಸಿ ಪ್ರಕಟಿಸಿದೆ.

ಈ ಹಿಂದಿನ ಪಟ್ಟಿಯಲ್ಲಿದ್ದ ಇಬ್ಬರನ್ನು ಕೈಬಿಟ್ಟು ಯಕ್ಷಗಾನ ಸಹಿತ ಎರಡು ಕ್ಷೇತ್ರಗಳಿಗೆ ಇಬ್ಬರನ್ನು ಹೊಸದಾಗಿ ಸೇರ್ಪಡೆಗೊಳಿಸಿ ಒಟ್ಟು 35 ಮಂದಿಯ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಯಕ್ಷಗಾನ ಕ್ಷೇತ್ರದಲ್ಲಿ ಶ್ರೀಧರ್ ಗಾಣಿಗ ಉಪ್ಪುಂದ ಹಾಗೂ ಸಂಕೀರ್ಣ ಕ್ಷೇತ್ರದಲ್ಲಿ ಮಣೂರು ಮಧುಸೂದನ್ ಬಾಯರಿ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಹಿಂದಿನ ಪಟ್ಟಿಯಲ್ಲಿದ್ದ ಯೋಗ ಕ್ಷೇತ್ರದ ಕೆ.ನರೇಂದ್ರ ಕಾಮತ್ ಪೆರ್ವಾಜೆ ಹಾಗೂ ಸಮಾಜ ಸೇವೆ ಕ್ಷೇತ್ರದ ನಾಗರಾಜ್ ಪುತ್ರನ್ ಕೋಟತಟ್ಟು ಅವರ ಹೆಸರನ್ನು ಕೈಬಿಡಲಾಗಿದೆ. ಮೊದಲ ಪಟ್ಟಿಯಲ್ಲಿದ್ದ ಮಹಾಬಲ ಸುವರ್ಣ ಹಾಗೂ ಪೂವಪ್ಪ ಪೂಜಾರಿ ಅವರಿಗೆ ದೈವರಾಧನೆ ಕ್ಷೇತ್ರವನ್ನು ಕೈಬಿಟ್ಟು ಸಂಕೀರ್ಣ ಕ್ಷೇತ್ರ ಎಂಬುದಾಗಿ ಬದಲಾಯಿಸಲಾಗಿದೆ. ಅದೇ ರೀತಿ ಕುಷ್ಟ ಕೊರಗ ಅವರಿಗೆ ಕಲೆಯ ಬದಲು ಕರಕುಶಲ ಕ್ಷೇತ್ರದಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು