2:53 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಕೊನೆಗೂ ಯಕ್ಷಗಾನಕ್ಕೆ ಪ್ರಾತಿನಿಧ್ಯ; ಇಬ್ಬರು  ಲಿಸ್ಟ್ ನಿಂದ ಔಟ್

31/10/2021, 23:10

ಉಡುಪಿ(reporterkarnataka.com): ಅ.30ರಂದು ಜಿಲ್ಲಾಡಳಿತ ಪ್ರಕಟಿಸಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾದ 35 ಮಂದಿಯ ಪಟ್ಟಿಯಲ್ಲಿ ಯಕ್ಷಗಾನ ಹಾಗೂ ಕೃಷಿ ಕ್ಷೇತ್ರದಲ್ಲಿ ಯಾರೊಬ್ಬರನ್ನೂ ಪರಿಗಣಿಸಿಲ್ಲ ಎಂದು

ಸಾಮಾಜಿಕ ಜಾಲತಾಣ ಗಳಲ್ಲಿ ತೀವ್ರ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರಿಂದ ಜಿಲ್ಲಾಡಳಿತ ತರಾತುರಿಯಲ್ಲಿ ಪ್ರಶಸ್ತಿ ಪಟ್ಟಿಯನ್ನು ಪರಿಷ್ಕರಿಸಿ ಪ್ರಕಟಿಸಿದೆ.

ಈ ಹಿಂದಿನ ಪಟ್ಟಿಯಲ್ಲಿದ್ದ ಇಬ್ಬರನ್ನು ಕೈಬಿಟ್ಟು ಯಕ್ಷಗಾನ ಸಹಿತ ಎರಡು ಕ್ಷೇತ್ರಗಳಿಗೆ ಇಬ್ಬರನ್ನು ಹೊಸದಾಗಿ ಸೇರ್ಪಡೆಗೊಳಿಸಿ ಒಟ್ಟು 35 ಮಂದಿಯ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಯಕ್ಷಗಾನ ಕ್ಷೇತ್ರದಲ್ಲಿ ಶ್ರೀಧರ್ ಗಾಣಿಗ ಉಪ್ಪುಂದ ಹಾಗೂ ಸಂಕೀರ್ಣ ಕ್ಷೇತ್ರದಲ್ಲಿ ಮಣೂರು ಮಧುಸೂದನ್ ಬಾಯರಿ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಹಿಂದಿನ ಪಟ್ಟಿಯಲ್ಲಿದ್ದ ಯೋಗ ಕ್ಷೇತ್ರದ ಕೆ.ನರೇಂದ್ರ ಕಾಮತ್ ಪೆರ್ವಾಜೆ ಹಾಗೂ ಸಮಾಜ ಸೇವೆ ಕ್ಷೇತ್ರದ ನಾಗರಾಜ್ ಪುತ್ರನ್ ಕೋಟತಟ್ಟು ಅವರ ಹೆಸರನ್ನು ಕೈಬಿಡಲಾಗಿದೆ. ಮೊದಲ ಪಟ್ಟಿಯಲ್ಲಿದ್ದ ಮಹಾಬಲ ಸುವರ್ಣ ಹಾಗೂ ಪೂವಪ್ಪ ಪೂಜಾರಿ ಅವರಿಗೆ ದೈವರಾಧನೆ ಕ್ಷೇತ್ರವನ್ನು ಕೈಬಿಟ್ಟು ಸಂಕೀರ್ಣ ಕ್ಷೇತ್ರ ಎಂಬುದಾಗಿ ಬದಲಾಯಿಸಲಾಗಿದೆ. ಅದೇ ರೀತಿ ಕುಷ್ಟ ಕೊರಗ ಅವರಿಗೆ ಕಲೆಯ ಬದಲು ಕರಕುಶಲ ಕ್ಷೇತ್ರದಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು