11:30 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಕೊನೆಗೂ ಯಕ್ಷಗಾನಕ್ಕೆ ಪ್ರಾತಿನಿಧ್ಯ; ಇಬ್ಬರು  ಲಿಸ್ಟ್ ನಿಂದ ಔಟ್

31/10/2021, 23:10

ಉಡುಪಿ(reporterkarnataka.com): ಅ.30ರಂದು ಜಿಲ್ಲಾಡಳಿತ ಪ್ರಕಟಿಸಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾದ 35 ಮಂದಿಯ ಪಟ್ಟಿಯಲ್ಲಿ ಯಕ್ಷಗಾನ ಹಾಗೂ ಕೃಷಿ ಕ್ಷೇತ್ರದಲ್ಲಿ ಯಾರೊಬ್ಬರನ್ನೂ ಪರಿಗಣಿಸಿಲ್ಲ ಎಂದು

ಸಾಮಾಜಿಕ ಜಾಲತಾಣ ಗಳಲ್ಲಿ ತೀವ್ರ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರಿಂದ ಜಿಲ್ಲಾಡಳಿತ ತರಾತುರಿಯಲ್ಲಿ ಪ್ರಶಸ್ತಿ ಪಟ್ಟಿಯನ್ನು ಪರಿಷ್ಕರಿಸಿ ಪ್ರಕಟಿಸಿದೆ.

ಈ ಹಿಂದಿನ ಪಟ್ಟಿಯಲ್ಲಿದ್ದ ಇಬ್ಬರನ್ನು ಕೈಬಿಟ್ಟು ಯಕ್ಷಗಾನ ಸಹಿತ ಎರಡು ಕ್ಷೇತ್ರಗಳಿಗೆ ಇಬ್ಬರನ್ನು ಹೊಸದಾಗಿ ಸೇರ್ಪಡೆಗೊಳಿಸಿ ಒಟ್ಟು 35 ಮಂದಿಯ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಯಕ್ಷಗಾನ ಕ್ಷೇತ್ರದಲ್ಲಿ ಶ್ರೀಧರ್ ಗಾಣಿಗ ಉಪ್ಪುಂದ ಹಾಗೂ ಸಂಕೀರ್ಣ ಕ್ಷೇತ್ರದಲ್ಲಿ ಮಣೂರು ಮಧುಸೂದನ್ ಬಾಯರಿ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಹಿಂದಿನ ಪಟ್ಟಿಯಲ್ಲಿದ್ದ ಯೋಗ ಕ್ಷೇತ್ರದ ಕೆ.ನರೇಂದ್ರ ಕಾಮತ್ ಪೆರ್ವಾಜೆ ಹಾಗೂ ಸಮಾಜ ಸೇವೆ ಕ್ಷೇತ್ರದ ನಾಗರಾಜ್ ಪುತ್ರನ್ ಕೋಟತಟ್ಟು ಅವರ ಹೆಸರನ್ನು ಕೈಬಿಡಲಾಗಿದೆ. ಮೊದಲ ಪಟ್ಟಿಯಲ್ಲಿದ್ದ ಮಹಾಬಲ ಸುವರ್ಣ ಹಾಗೂ ಪೂವಪ್ಪ ಪೂಜಾರಿ ಅವರಿಗೆ ದೈವರಾಧನೆ ಕ್ಷೇತ್ರವನ್ನು ಕೈಬಿಟ್ಟು ಸಂಕೀರ್ಣ ಕ್ಷೇತ್ರ ಎಂಬುದಾಗಿ ಬದಲಾಯಿಸಲಾಗಿದೆ. ಅದೇ ರೀತಿ ಕುಷ್ಟ ಕೊರಗ ಅವರಿಗೆ ಕಲೆಯ ಬದಲು ಕರಕುಶಲ ಕ್ಷೇತ್ರದಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು