4:45 AM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಉಡುಪಿ ಸಂತೆಕಟ್ಟೆಯಲ್ಲಿ ಅಂಗಡಿಗಳಿಗೆ ದಾಳಿ: 81 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶ; ದಂಡ ವಸೂಲಿ

09/11/2023, 21:40

ಉಡುಪಿ(reporterkarnataka.com): ಉಡುಪಿ ನಗರಸಭಾ ವ್ಯಾಪ್ತಿಯ ಆದಿ ಉಡುಪಿ ಸಂತೆ ಮಾರುಕಟ್ಟೆಯಲ್ಲಿ ಬುಧವಾರ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ 81 ಕೆಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 12,400 ರೂ. ದಂಡ ವಿಧಿಸಿ, ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಸೂಚಿಸಲಾಯಿತು.

ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮನೆ, ಮದುವೆ ಹಾಲ್, ಹೊಟೇಲ್‌ಗಳಲ್ಲಿ ಸಮಾರಂಭ ಮಾಡುವಾಗ ಹಾಗೂ ರಸ್ತೆ ಬದಿ ಟೀ, ಕಾಫಿ, ತಿಂಡಿ ಮಾರಾಟ ಮಾಡುವವರು ರಾಜ್ಯ ಸರ್ಕಾರದ ನಿರ್ದೇಶನದಂತೆ ರೆಡ್ಯೂಸ್, ರೀಯೂಸ್, ರಿಸೈಕಲ್ ಮಾದರಿಯಲ್ಲಿ ತ್ಯಾಜ್ಯ ವಸ್ತುಗಳನ್ನು ಕಡಿಮೆ ಮಾಡುವ ಹಿತ ದೃಷ್ಟಿಯಿಂದ ಮರುಬಳಕೆಯ ವಸ್ತುಗಳಾದ ಸ್ಟೀಲ್ ಲೋಟ, ಸ್ಟೀಲ್ ತಟ್ಟೆಗಳನ್ನು ಕಡ್ಡಾಯವಾಗಿ ಬಳಸಬೇಕು. ಉಡುಪಿ ನಗರವನ್ನು ಕಸ ಮುಕ್ತ ನಗರವನ್ನಾಗಿ ಮಾಡುವುದು, ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಪರಿಸರ ಸಂರಕ್ಷಣೆ ಮಾಡಲು ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸಬೇಕು.
ನಗರಸಭೆಯ ಕಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನೀಟರಿ ಸೂಪರ್‌ವೈಸರ್‌ನವರು ಹಾಗೂ ಪೌರಕಾರ್ಮಿಕರು ಅನಿರೀಕ್ಷಿತ ದಾಳಿ ನಡೆಸುತ್ತಿದ್ದು, ಸಾರ್ವಜನಿಕರು, ಉದ್ದಿಮೆದಾರರು, ವ್ಯಾಪಾರಿಯವರು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದು ಕಂಡು ಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸುವುದರೊಂದಿಗೆ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು