2:53 PM Wednesday23 - October 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ ರೈತ ಭವನದಲ್ಲಿ ಅ.25ರಂದು ವೈವಿಧ್ಯಮಯ ‘ಮಲೆನಾಡು ಹಬ್ಬ’ ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು

ಇತ್ತೀಚಿನ ಸುದ್ದಿ

ಉಡುಪಿ ಸರಕಾರಿ ಕಾಲೇಜು ಹಿಜಾಬ್ ವಿವಾದ: ಅರ್ಜಿ ವಿಚಾರಣೆ ಫೆಬ್ರವರಿ 8ಕ್ಕೆ ಮುಂದೂಡಿದ ಹೈಕೋರ್ಟ್

04/02/2022, 08:58

ಬೆಂಗಳೂರು(reporterkarnataka.com):

ಉಡುಪಿಯ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಕ್ರಮ ಪ್ರಶ್ನಿಸಿವಿದ್ಯಾರ್ಥಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಫೆಬ್ರವರಿ 8ಕ್ಕೆ ಮುಂದೂಡಿದೆ.

ವಿದ್ಯಾರ್ಥಿನಿ ರೇಷ್ಮಾ ಫಾರೂಕ್, ಇತರೆ ವಿದ್ಯಾರ್ಥಿನಿಯರ ಪೋಷಕರು ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳನ್ನು ಇಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ.

ವಿಚಾರಣೆಯಲ್ಲಿ ಸರ್ಕಾರದ ಪರ ವಕೀಲರು ಹಾಜರಾಗಿ, ಅಡ್ವೋಕೇಟ್ ಜನರಲ್ ವಾದ ಮಂಡಿಸಲಿದ್ದಾರೆ. ಅದಕ್ಕಾಗಿ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ವಿದ್ಯಾರ್ಥಿಗಳ ಪರ ವಕೀಲರು ವಾದಿಸಿ, ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಬೇಕು. ವಿದ್ಯಾರ್ಥಿನಿಯರನ್ನು ತರಗತಿಗೆ ಸೇರಿಸುತ್ತಿಲ್ಲ. ಇದರಿಂದ ಅವರ ಕಲಿಕೆಗೆ ಸಮಸ್ಯೆಯಾಗಿದೆ ಎಂದು ಕೋರಿದರು.

ವಾದ-ಪ್ರತಿವಾದ ಆಲಿಸಿದ ಪೀಠ, ಅರ್ಜಿ ಸಂಬಂಧ ವಿವರಣೆ ನೀಡಲು ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು