5:00 AM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಉಡುಪಿ ಸರಕಾರಿ ಕಾಲೇಜು ಹಿಜಾಬ್ ವಿವಾದ: ಅರ್ಜಿ ವಿಚಾರಣೆ ಫೆಬ್ರವರಿ 8ಕ್ಕೆ ಮುಂದೂಡಿದ ಹೈಕೋರ್ಟ್

04/02/2022, 08:58

ಬೆಂಗಳೂರು(reporterkarnataka.com):

ಉಡುಪಿಯ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಕ್ರಮ ಪ್ರಶ್ನಿಸಿವಿದ್ಯಾರ್ಥಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಫೆಬ್ರವರಿ 8ಕ್ಕೆ ಮುಂದೂಡಿದೆ.

ವಿದ್ಯಾರ್ಥಿನಿ ರೇಷ್ಮಾ ಫಾರೂಕ್, ಇತರೆ ವಿದ್ಯಾರ್ಥಿನಿಯರ ಪೋಷಕರು ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳನ್ನು ಇಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ.

ವಿಚಾರಣೆಯಲ್ಲಿ ಸರ್ಕಾರದ ಪರ ವಕೀಲರು ಹಾಜರಾಗಿ, ಅಡ್ವೋಕೇಟ್ ಜನರಲ್ ವಾದ ಮಂಡಿಸಲಿದ್ದಾರೆ. ಅದಕ್ಕಾಗಿ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ವಿದ್ಯಾರ್ಥಿಗಳ ಪರ ವಕೀಲರು ವಾದಿಸಿ, ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಬೇಕು. ವಿದ್ಯಾರ್ಥಿನಿಯರನ್ನು ತರಗತಿಗೆ ಸೇರಿಸುತ್ತಿಲ್ಲ. ಇದರಿಂದ ಅವರ ಕಲಿಕೆಗೆ ಸಮಸ್ಯೆಯಾಗಿದೆ ಎಂದು ಕೋರಿದರು.

ವಾದ-ಪ್ರತಿವಾದ ಆಲಿಸಿದ ಪೀಠ, ಅರ್ಜಿ ಸಂಬಂಧ ವಿವರಣೆ ನೀಡಲು ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು