5:45 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಉಡುಪಿ ಸರಕಾರಿ ಕಾಲೇಜು ಹಿಜಾಬ್ ವಿವಾದ: ಅರ್ಜಿ ವಿಚಾರಣೆ ಫೆಬ್ರವರಿ 8ಕ್ಕೆ ಮುಂದೂಡಿದ ಹೈಕೋರ್ಟ್

04/02/2022, 08:58

ಬೆಂಗಳೂರು(reporterkarnataka.com):

ಉಡುಪಿಯ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಕ್ರಮ ಪ್ರಶ್ನಿಸಿವಿದ್ಯಾರ್ಥಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಫೆಬ್ರವರಿ 8ಕ್ಕೆ ಮುಂದೂಡಿದೆ.

ವಿದ್ಯಾರ್ಥಿನಿ ರೇಷ್ಮಾ ಫಾರೂಕ್, ಇತರೆ ವಿದ್ಯಾರ್ಥಿನಿಯರ ಪೋಷಕರು ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳನ್ನು ಇಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ.

ವಿಚಾರಣೆಯಲ್ಲಿ ಸರ್ಕಾರದ ಪರ ವಕೀಲರು ಹಾಜರಾಗಿ, ಅಡ್ವೋಕೇಟ್ ಜನರಲ್ ವಾದ ಮಂಡಿಸಲಿದ್ದಾರೆ. ಅದಕ್ಕಾಗಿ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ವಿದ್ಯಾರ್ಥಿಗಳ ಪರ ವಕೀಲರು ವಾದಿಸಿ, ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಬೇಕು. ವಿದ್ಯಾರ್ಥಿನಿಯರನ್ನು ತರಗತಿಗೆ ಸೇರಿಸುತ್ತಿಲ್ಲ. ಇದರಿಂದ ಅವರ ಕಲಿಕೆಗೆ ಸಮಸ್ಯೆಯಾಗಿದೆ ಎಂದು ಕೋರಿದರು.

ವಾದ-ಪ್ರತಿವಾದ ಆಲಿಸಿದ ಪೀಠ, ಅರ್ಜಿ ಸಂಬಂಧ ವಿವರಣೆ ನೀಡಲು ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು