5:07 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಉಡುಪಿ: ವಿದ್ಯಾರ್ಥಿನಿ ಚಲಾಯಿಸುತ್ತಿದ್ದ ಕಾರು ಬೈಕಿಗೆ ಡಿಕ್ಕಿ: ಸವಾರ ಮೆಡಿಕಲ್ ಶಾಪ್ ಮಾಲಿಕ ಸಾವು

26/03/2022, 20:39

ಉಡುಪಿ(reporterkarnataka.com): ವಿದ್ಯಾರ್ಥಿನಿಯೊಬ್ಬಳು ಚಲಾಯಿಸುತ್ತಿದ್ದ ಕಾರು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೆಡಿಕಲ್ ಶಾಪ್ ನ ಮಾಲೀಕರೊಬ್ಬರು ಮೃತಪಟ್ಟ ದಾರುಣ ಘಟನೆ ಪರ್ಕಳದಲ್ಲಿ ಶನಿವಾರ ನಡೆದಿದೆ.

ಮೃತಪಟ್ಟವರನ್ನು ವಾಮನ ನಾಯಕ್ ಎಂದು ಗುರುತಿಸಲಾಗಿದೆ.

ತಕ್ಷಣ ಗಾಯಾಳುವನ್ನು ಉಡುಪಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಘಟನೆ ವಿವರ: ವಾಮನ ನಾಯಕ್ ಅವರು ಬೆಳಿಗ್ಗೆ 8 ಗಂಟೆಗೆ ತನ್ನ ಮಗನನ್ನು ಉಡುಪಿಯಲ್ಲಿ ಬಿಟ್ಟು ಬೈಕ್ ನಲ್ಲಿ ಪರ್ಕಳದ ತಮ್ಮ ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ವಿದ್ಯಾರ್ಥಿನಿ ಅದಿತಿ ಉಡುಪ ಎಂಬವರು ಚಲಾಯಿಸುತ್ತಿದ್ದ ಕಾರು ಬೈಕ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ವಾಮನ ನಾಯಕ್ ತಲೆಗೆ ಗಂಭೀರ ಗಾಯವಾಗಿತ್ತು. ಅಪಘಾತ ನಡೆದ ಬಳಿಕ ವಿದ್ಯಾರ್ಥಿನಿ ಕಾರು ನಿಲ್ಲಿಸದೆ ಪರಾರಿಯಾಗಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬಳಿಕ ಕಾರಿನ ನಂಬರ್ ಮೂಲಕ ಅಪಘಾತ ನಡೆಸಿದ ವಿದ್ಯಾರ್ಥಿನಿ ಹಾಗೂ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಉಡುಪಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು