5:29 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಉಡುಪಿಯಲ್ಲಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಕಥಾ ಕಮ್ಮಟ

16/11/2023, 21:08

ಉಡುಪಿ(reporterkarnataka.com): ಕನ್ನಡದಲ್ಲಿ ಹಲವು ಲೇಖಕರು ಅತ್ಯುತ್ತಮ ಕಥೆಗಳನ್ನು ಬರೆದುನಾಡಿನ ಬೇರೆ ಬೇರೆ ಭಾಷೆಗಳಿಗೆ ಭಾಷಾಂತರಗೊಳಿಸಿ, ಕನ್ನಡಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಎಂದು ಪ್ರೊ. ಮುರಳೀಧರ ಉಪಾಧ್ಯ ಹೇಳಿದರು.
ಅವರು ಗುರುವಾರ ಎಂಜಿಎಂ ಕಾಲೇಜು , ಕನ್ನಡ ಸಾಹಿತ್ಯ ಸಂಘ, ಐಕ್ಯೂಎಸಿ ಮತ್ತು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಜಿಲ್ಲೆಯ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕಥಾ ಕಮ್ಮಟ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
ಮಾಸ್ತಿ , ಶಿವರಾಮ ಕಾರಂತರು, ಲಂಕೇಶ್ , ಅನಂತಮೂರ್ತಿ, ವೈದೇಹಿ ಇಂಥವರ ಕಥೆಗಳನ್ನು ವಿದ್ಯಾರ್ಥಿಗಳು ಓದಬೇಕು. ಇಂತಹ ಕಮ್ಮಟಗಳ ಮೂಲಕ ವಿದ್ಯಾರ್ಥಿಗಳು ಮುಂದೆ ಒಳ್ಳೆಯ ಕಥೆಗಾರರು ಆಗಲು ಸಾಧ್ಯ ಎಂದರು.
ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹ ಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ , ಎಂಜಿಎಂ ಕಾಲೇಜು ಐಕ್ಯೂಎಸಿ ಮುಖ್ಯಸ್ಥೆ ಪ್ರೊ. ಶೈಲಜ, ಕಸಾಪ ಹೆಬ್ರಿ ತಾಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ್ ಭಂಡಾರಿ ಉಪಸ್ಥಿತರಿದ್ದರು.
ಎಂಜಿಎಂ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪುತ್ತಿ ವಸಂತ್ ಕುಮಾರ್ ಸ್ವಾಗತಿಸಿದರು. ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಜನಾರ್ದನ ಕೊಡವೂರು ನಿರೂಪಿಸಿದರು.
ಕಸಾಪ ತಾಲೂಕು ಘಟಕಾಧ್ಯಕ್ಷ
ರವಿರಾಜ್ ಎಚ್. ಪಿ. ಪ್ರಾಸ್ತಾವಿಕಾಗಿ ಮಾತನಾಡಿದರು. ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು