12:36 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಉಡುಪಿಯಲ್ಲಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಕಥಾ ಕಮ್ಮಟ

16/11/2023, 21:08

ಉಡುಪಿ(reporterkarnataka.com): ಕನ್ನಡದಲ್ಲಿ ಹಲವು ಲೇಖಕರು ಅತ್ಯುತ್ತಮ ಕಥೆಗಳನ್ನು ಬರೆದುನಾಡಿನ ಬೇರೆ ಬೇರೆ ಭಾಷೆಗಳಿಗೆ ಭಾಷಾಂತರಗೊಳಿಸಿ, ಕನ್ನಡಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಎಂದು ಪ್ರೊ. ಮುರಳೀಧರ ಉಪಾಧ್ಯ ಹೇಳಿದರು.
ಅವರು ಗುರುವಾರ ಎಂಜಿಎಂ ಕಾಲೇಜು , ಕನ್ನಡ ಸಾಹಿತ್ಯ ಸಂಘ, ಐಕ್ಯೂಎಸಿ ಮತ್ತು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಜಿಲ್ಲೆಯ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕಥಾ ಕಮ್ಮಟ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
ಮಾಸ್ತಿ , ಶಿವರಾಮ ಕಾರಂತರು, ಲಂಕೇಶ್ , ಅನಂತಮೂರ್ತಿ, ವೈದೇಹಿ ಇಂಥವರ ಕಥೆಗಳನ್ನು ವಿದ್ಯಾರ್ಥಿಗಳು ಓದಬೇಕು. ಇಂತಹ ಕಮ್ಮಟಗಳ ಮೂಲಕ ವಿದ್ಯಾರ್ಥಿಗಳು ಮುಂದೆ ಒಳ್ಳೆಯ ಕಥೆಗಾರರು ಆಗಲು ಸಾಧ್ಯ ಎಂದರು.
ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹ ಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ , ಎಂಜಿಎಂ ಕಾಲೇಜು ಐಕ್ಯೂಎಸಿ ಮುಖ್ಯಸ್ಥೆ ಪ್ರೊ. ಶೈಲಜ, ಕಸಾಪ ಹೆಬ್ರಿ ತಾಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ್ ಭಂಡಾರಿ ಉಪಸ್ಥಿತರಿದ್ದರು.
ಎಂಜಿಎಂ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪುತ್ತಿ ವಸಂತ್ ಕುಮಾರ್ ಸ್ವಾಗತಿಸಿದರು. ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಜನಾರ್ದನ ಕೊಡವೂರು ನಿರೂಪಿಸಿದರು.
ಕಸಾಪ ತಾಲೂಕು ಘಟಕಾಧ್ಯಕ್ಷ
ರವಿರಾಜ್ ಎಚ್. ಪಿ. ಪ್ರಾಸ್ತಾವಿಕಾಗಿ ಮಾತನಾಡಿದರು. ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು