12:14 AM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಉಡುಪಿಯಲ್ಲಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಕಥಾ ಕಮ್ಮಟ

16/11/2023, 21:08

ಉಡುಪಿ(reporterkarnataka.com): ಕನ್ನಡದಲ್ಲಿ ಹಲವು ಲೇಖಕರು ಅತ್ಯುತ್ತಮ ಕಥೆಗಳನ್ನು ಬರೆದುನಾಡಿನ ಬೇರೆ ಬೇರೆ ಭಾಷೆಗಳಿಗೆ ಭಾಷಾಂತರಗೊಳಿಸಿ, ಕನ್ನಡಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಎಂದು ಪ್ರೊ. ಮುರಳೀಧರ ಉಪಾಧ್ಯ ಹೇಳಿದರು.
ಅವರು ಗುರುವಾರ ಎಂಜಿಎಂ ಕಾಲೇಜು , ಕನ್ನಡ ಸಾಹಿತ್ಯ ಸಂಘ, ಐಕ್ಯೂಎಸಿ ಮತ್ತು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಜಿಲ್ಲೆಯ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕಥಾ ಕಮ್ಮಟ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
ಮಾಸ್ತಿ , ಶಿವರಾಮ ಕಾರಂತರು, ಲಂಕೇಶ್ , ಅನಂತಮೂರ್ತಿ, ವೈದೇಹಿ ಇಂಥವರ ಕಥೆಗಳನ್ನು ವಿದ್ಯಾರ್ಥಿಗಳು ಓದಬೇಕು. ಇಂತಹ ಕಮ್ಮಟಗಳ ಮೂಲಕ ವಿದ್ಯಾರ್ಥಿಗಳು ಮುಂದೆ ಒಳ್ಳೆಯ ಕಥೆಗಾರರು ಆಗಲು ಸಾಧ್ಯ ಎಂದರು.
ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹ ಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ , ಎಂಜಿಎಂ ಕಾಲೇಜು ಐಕ್ಯೂಎಸಿ ಮುಖ್ಯಸ್ಥೆ ಪ್ರೊ. ಶೈಲಜ, ಕಸಾಪ ಹೆಬ್ರಿ ತಾಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ್ ಭಂಡಾರಿ ಉಪಸ್ಥಿತರಿದ್ದರು.
ಎಂಜಿಎಂ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪುತ್ತಿ ವಸಂತ್ ಕುಮಾರ್ ಸ್ವಾಗತಿಸಿದರು. ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಜನಾರ್ದನ ಕೊಡವೂರು ನಿರೂಪಿಸಿದರು.
ಕಸಾಪ ತಾಲೂಕು ಘಟಕಾಧ್ಯಕ್ಷ
ರವಿರಾಜ್ ಎಚ್. ಪಿ. ಪ್ರಾಸ್ತಾವಿಕಾಗಿ ಮಾತನಾಡಿದರು. ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು