8:17 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಉಡುಪಿಯ ಉಸ್ತುವಾರಿ ಮಂತ್ರಿ ಇನ್ನು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ!: ವಲಸೆ ಬಂದು ಸಿಎಂ ಆದ 2ನೇ ರಾಜಕಾರಣಿ!!

27/07/2021, 22:50

ಬೆಂಗಳೂರು(reporterkarnataka news): ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಗೊಂಡಿದ್ದಾರೆ. ಕರಾವಳಿಯ ಉಡುಪಿ ಜಿಲ್ಲೆಯ ಉಸ್ತುವಾರಿ ಮಂತ್ರಿ ಈಗ ಇಡೀ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿದ್ದಾರೆ.

ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗುವ ಮೂಲಕ ರಾಜ್ಯದಲ್ಲಿ ಮಾತೃಪಕ್ಷವನ್ನು ತೊರೆದು ಬಂದವರಲ್ಲಿ ಇಬ್ಬರು ಮುಖ್ಯಮಂತ್ರಿ ಆದ್ದಂತಾಗಿದೆ. ಮೊದಲನೆಯದಾಗಿ ಸಿದ್ದರಾಮಯ್ಯ ಅವರು ಜನತಾ ಪರಿವಾರದಿಂದ ಹೊರ ಬಂದು ಕಾಂಗ್ರೆಸ್ ಸೇರಿದ ಬಳಿಕ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿಯಿತು. ಬಸವರಾಜ ಬೊಮ್ಮಾಯಿ ಅವರು ಕೂಡ ತನ್ನ ಮಾತೃಪಕ್ಷವಾದ ಜನತಾ ಪರಿವಾರದಿಂದ ಹೊರ ಬಂದು ಬಿಜೆಪಿ ಸೇರಿದ ಬಳಿಕ ನೀರಾವರಿ ಸಚಿವರಾಗಿ, ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಮುಖ್ಯಮಂತ್ರಿಯಾಗಿದ್ದಾರೆ.

ಸಿದ್ದರಾಮಯ್ಯ ಅವರು 2006ರಲ್ಲಿ ಜೆಡಿಎಸ್ ಯಿಂದ ಹೊರಗಡೆ ಬಂದು 2013ರಲ್ಲಿ ಕಾಂಗ್ರೆಸ್ ನಿಂದ ಮುಖ್ಯಮಂತ್ರಿಯಾದರು. 2008ರಲ್ಲಿ ಜೆಡಿಎಸ್ ಬಿಟ್ಟು ಬಿಜೆಪಿಗೆ ಬಂದ ಬಸವರಾಜ ಬೊಮ್ಮಾಯಿ ಅವರು ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಗೊಂಡಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಜನತಾ ಪರಿವಾರದಿಂದ ಬಂದ ಎಸ್. ಆರ್. ಬೊಮ್ಮಾಯಿ ಅವರ ಪುತ್ರ. ಜನತಾ ಪರಿವಾರದಿಂದ ಹೊರ ಬಂದ ಬಳಿಕ ಅವರು ರಾಜಕೀಯವಾಗಿ ಆಯ್ಕೆ ಮಾಡಿಕೊಂಡಿರುವುದು ಬಿಜೆಪಿ ಪಕ್ಷವನ್ನು. ಯಡಿಯೂರಪ್ಪ ಅವರ ಮೊದಲ ಸರಕಾರದಲ್ಲಿಯೂ ಬೊಮ್ಮಾಯಿ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅವರ ತಂದೆ ಎಸ್. ಆರ್. ಬೊಮ್ಮಾಯಿ ಅವರು ಜನತಾ ಸರಕಾರದಲ್ಲಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರಕಾರ ಬೊಮ್ಮಾಯಿ ಸರಕಾರವನ್ನು ವಜಾಗೊಳಿಸಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಿತ್ತು. ಇದರ ವಿರುದ್ಧ ಸುಪ್ರೀಂಕೊರ್ಟ್ ಗೆ ಮೊರೆ ಹೋಗಲಾಗಿತ್ತು. ಬೊಮ್ಮಾಯಿ ಸರಕಾರವನ್ನು ವಜಾಗೊಳಿಸಿದ ಕೇಂದ್ರದ ಕ್ರಮ ಅಸಿಂಧು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಅಷ್ಟೊತ್ತಿಗೆ ಬೇರೆ ಸರಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿತ್ತು. 

ಇತ್ತೀಚಿನ ಸುದ್ದಿ

ಜಾಹೀರಾತು