6:08 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಉಡುಪಿಯ ಉಸ್ತುವಾರಿಯಾದದ್ದು ನನ್ನ ಸೌಭಾಗ್ಯ; ಶ್ರೀಕೃಷ್ಣನ ಆಶೀರ್ವಾದಿಂದ ಮುಖ್ಯಮಂತ್ರಿಯಾಗಿದ್ದೇನೆ: ಬೊಮ್ಮಾಯಿ

12/08/2021, 19:46

ಉಡುಪಿ(reporterkarnataka.com): ಎರಡು ವರ್ಷಗಳ ಕಾಲ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದು ನನ್ನ ಸೌಭಾಗ್ಯ. ನಾನು ಗ್ರಹಿಸದ, ಎಣಿಸದ, ನಾನು ಬಯಸದ ಮುಖ್ಯಮಂತ್ರಿ ಹುದ್ದೆ ಸಿಕ್ಕಿದೆ. ಎಲ್ಲವೂ ದೈವೇಚ್ಛೆ ಹಾಗೂ ಶ್ರೀಕೃಷ್ಣ ಪರಮಾತ್ಮನ ಆಶೀರ್ವಾದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 250 ಹಾಸಿಗೆಗಳ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಆರೋಗ್ಯ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಗೆ ಉತ್ತರ ಕನ್ನಡ ಕಡೆಯಿಂದ ತುಂಬಾ ಜನರು ಬರುತ್ತಿದ್ದಾರೆ. ಸರಕಾರದ ಕಡೆಯಿಂದ ಆಸ್ಪತ್ರೆಯ ಅವಶ್ಯಕತೆ ಇದೆ. ಉಡುಪಿ ಜಿಲ್ಲೆಯಲ್ಲಿಯೂ ಜನಸಂಖ್ಯೆ ಹೆಚ್ಚಾಗುತ್ತಿದೆ. ಜನರ ಆಶೋತ್ತರಗಳು ಕೂಡ ಹೆಚ್ಚುತ್ತಿದೆ. ಜನರ ಆಶೋತ್ತರ ಈಡೇರಿಸುವುದು ಸರಕಾರದ ಆದ್ಯ ಕರ್ತವ್ಯವಾಗಿದೆ. ಜನರ ಪ್ರಾಣ ರಕ್ಷಣೆ ಸರಕಾರದ ಆದ್ಯ ಕರ್ತವ್ಯ ಎಂದು ಅವರು ನುಡಿದರು.

ಸಚಿವರಾದ ಡಾ.ಕೆ. ಸುಧಾಕರ್, ಸುನಿಲ್ ಕುಮಾರ್, ಶಾಸಕ ಕೆ. ರಘುಪತಿಭಟ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು