3:40 PM Tuesday25 - March 2025
ಬ್ರೇಕಿಂಗ್ ನ್ಯೂಸ್
Constitution | ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ… Delhi | ಸಂವಿಧಾನ ವಿರೋಧಿ ರಾಜ್ಯ ಸರಕಾರ ರಾಜೀನಾಮೆ ನೀಡಲಿ: ಮಾಜಿ ಸಿಎಂ… Honey Trap | ಬಿಜೆಪಿ ಬಳಿ ಸಿಡಿ‌ ಫ್ಯಾಕ್ಟರಿಯೇ ಇದೆ; ಅವರ ಕಾಲದಲ್ಲಿ… Speaker | ಅಶಿಸ್ತು, ಅಗೌರವ ತೋರಿಸಿದರೆ ಮುಂದಿನ ಅಧಿವೇಶನದಲ್ಲೂ ಸಸ್ಪೆಂಡ್ ಮಾಡುವೆ: ಸ್ಪೀಕರ್… ಚಿಕ್ಕಮಗಳೂರು: ಸಿಡಿಲು ಬಡಿದು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೃದ್ದ ಮಹಿಳೆ ಸಾವು IndiGo6E | ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಕೇಂದ್ರ ಸಚಿವ ಪ್ರಹ್ಲಾದ್… FIR Against Madhwaraj | ಮಹಿಳೆಯ ಕಟ್ಟಿ ಹಾಕಿ ಹಲ್ಲೆ ಪ್ರಕರಣದ ಸಮರ್ಥನೆ?:… Ugadi | ರಾಜಭವನದದಲ್ಲಿ ಚಿಗುರಿದ ‘ಚಂದನ’ದ ‘ಚೈತ್ರಾಂಜಲಿ’: ಗಾಜಿನ ಮನೆಯಲ್ಲಿ ಮೂಡಿ ಬಂತು… Karnataka Bundh | ಪ್ರತಿಷ್ಠೆಗಾಗಿ ಅನಾವಶ್ಯಕ ಬಂದ್ ಕರೆ ಕೊಡಬಾರದು: ಮಾಜಿ ಗೃಹ… 23.24 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್

ಇತ್ತೀಚಿನ ಸುದ್ದಿ

Ugadi | ರಾಜಭವನದದಲ್ಲಿ ಚಿಗುರಿದ ‘ಚಂದನ’ದ ‘ಚೈತ್ರಾಂಜಲಿ’: ಗಾಜಿನ ಮನೆಯಲ್ಲಿ ಮೂಡಿ ಬಂತು ಯುಗಾದಿ ನೃತ್ಯ, ಗಾನ ಸುಧೆ!

23/03/2025, 12:03

ಬೆಂಗಳೂರು(reporterkarnataka.com): ಹೊಸ ವರ್ಷವೆಂದೇ ಕರೆಯಲ್ಪಡುವ ಯುಗಾದಿ ಹಬ್ಬವನ್ನು ಚೈತ್ರ ಮಾಸದಲ್ಲಿ ಆಚರಿಸಲಾಗುವುದು. ಚೈತ್ರ ಮಾಸದಲ್ಲಿ ಎಲ್ಲಾ‌ ಮರಗಳು ತಮ್ಮ ಹಳೆಯ ತನವನ್ನು ಕಳೆದುಕೊಂಡು ಹೊಸ‌ ಚಿಗುರಿನೊಂದಿಗೆ ಯುಗಾದಿ ಹಬ್ಬವನ್ನು ಬರ ಮಾಡಿಕೊಳ್ಳುವುದು. ಯುಗಾದಿಯ ಆಗಮನದ ದಿನ ಎಲ್ಲೆಲ್ಲೂ ಸಿಹಿ-ಕಹಿ ಸವಿದು ಒಂದಾಗಿ ಮುನ್ನಡೆಯೋಣ ಎಂಬ ಸಂದೇಶದೊಂದಿಗೆ ದೂರದರ್ಶನ ಕೇಂದ್ರ, ಬೆಂಗಳೂರು ಚಂದನ ವಾಹಿನಿ ವತಿಯಿಂದ ರಾಜಭವನದ ಗಾಜಿನಮನಯಲ್ಲಿ ಶನಿವಾರ ಆಯೋಜಿಸಿದ್ದ ಯುಗಾದಿಯ ವಿಶೇಷ “ಚೈತ್ರಾಂಜಲಿ” ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.


“ಎಲ್ಲರಿಗೂ ನಮಸ್ಕಾರ, ತಮ್ಮೆಲ್ಲರನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇನೆ, ಸರ್ವರಿಗೂ ಯುಗಾದಿ ಹಬ್ಬದ ಶುಭಾಶಯಗಳು” ಎಂದು ಕನ್ನಡ ಭಾಷೆಯಲ್ಲಿ ಶುಭ ಕೋರಿದ ಗೌರವಾನ್ವಿತ ರಾಜ್ಯಪಾಲರು, ಇಡೀ ದೇಶದಲ್ಲಿ ಮಾರ್ಚ್ 30ರಂದು ಹೊಸ ವರ್ಷ ಆರಂಭವಾಗಲಿದೆ. ಯುಗಾದಿಯ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ದೂರದರ್ಶನದ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ದೇಶದ ಸಂಸ್ಕೃತಿ, ದೇಶದ ಧರ್ಮಾ, ದೇಶದ ಸಭ್ಯತೆ, ದೇಶದ ಹಬ್ಬಗಳ ಬಗ್ಗೆ ಇಂದಿನ ಯುವಪೀಳಿಗೆಗೆ ಮನದಟ್ಟು ಮಾಡಿಕೊಡಲು ಇಂತಹ ಕಾರ್ಯಕ್ರಮಗಳ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ದೂರದರ್ಶನ ಕೇಂದ್ರ ಚಂದನ ವಾಹಿನಿ ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯ. ಈ ಸಂಭ್ರಮದಲ್ಲಿ ಭಾಗಿಯಾಗಿರುವ ಸಿನೆಮಾ ತಾರೆಯರು, ಗಣ್ಯರು, ಅಧಿಕಾರಿಗಳು, ಮಕ್ಕಳು, ಯುವಕರು ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಈ ಹೊಸ ವರ್ಷವು ಎಲ್ಲರಿಗೂ ಸಂತೋಷ, ಸಮೃದ್ಧಿ, ಹೊಸತನ್ನು ತರಲಿ ಎಂದು ಪ್ರಾರ್ಥಿಸುತ್ತೇನೆಂದರು.
*ಮನಸೂರೆಗೊಳಿಸಿದ ನೃತ್ಯ, ಗಾನ ಸುಧೆ:*
ರಾಷ್ಟ್ರಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಭಾಗ್ಯಶ್ರೀ ಅವರು ಪ್ರಾರ್ಥನೆ ಸಲ್ಲಿಸಿದರು. ಅದೇ ಸಮಯಲ್ಲಿ ಕಲಾವಿದೆ ವಿಜಯಶ್ರೀ ಅವರಿಂದ ಪ್ರಕೃತಿ ಮಾತೆಯ ಚಿತ್ತಾರ ಮೂಡಿಬಂತು. ನಂತರ ಸುಂದರೇಶ್ ಸಿ. ಮತ್ತು ತಂಡದವರು ಡೊಳ್ಳು ಕುಣಿತ, ಕಂಸಾಳೆ, ವೀರಗಾಸೆ, ನಂದಿಕೋಲು ಕುಣಿತವನ್ನೊಳಗೊಂಡ ಜಾನಪದ ನೃತ್ಯ ನೆರದಿದ್ದವರ ಮನಸೂರೆಗೊಳಿಸಿತು.
ನಂತರ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಸಿನೆಮಾ ನಟ ಹಾಗೂ ನಿರ್ದೇಶಕರಾದ ಎಸ್. ನಾರಾಯಣ್ ಅವರು ಯುಗಾದಿ ಹಬ್ಬದ ಆಚರಣೆ ಬಗ್ಗೆ ಹಳೆಯದನ್ನು ಮೆಲುಕು ಹಾಕಿ, ಸಂಬಂಧ ಮಹತ್ವದ ಮತ್ತು ಅನುಭವದ ಬಗ್ಗೆ ಹಂಚಿಕೊಂಡರು. ನಟಿಯರಾದ ಅನುಪ್ರಭಾಕರ್, ಸುಧಾ ಬೆಳವಾಡಿ, ಸಂಯುಕ್ತ ಬೆಳವಾಡಿ ಸೇರಿದಂತೆ ಮುಂತಾದ ಗಣ್ಯರು ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರಿ, ವಿಶೇಷ ಕಾರ್ಯಕ್ರಮ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ನಂತರ ಪಂಚಮ್ ಹಳಿಬಂಡಿ ಮತ್ತು ತಂಡದವರು ಯುಗಾದಿ ಕುರಿತು ರೆಟ್ರೋ ಟು ಮೆಟ್ರೋ ಎಂಬ ಶೈಲಿಯಲ್ಲಿ ಕನ್ನಡ ಹಾಡುಗಳ ಮಿಶ್ರಣದಲ್ಲಿ ಗೀತಗುಚ್ಛ ಪ್ರಸ್ತುತಿಪಡಿಸಿದರು. “ಎಲ್ಲೆಲ್ಲೂ ಹಬ್ಬ ಹಬ್ಬ ಬಂತು ಯುಗಾದಿ ಹಬ್ಬ”, “ಯುಗಾ ಯುಗಾದಿ ಕಳೆದರೂ” ಈ ಹಸಿರ ಸಿರಿಯಲಿ, ಹೊಸಬೆಳಕು ಮೂಡುತಿದೆ, ನೇಸರ ನೋಡು, ದೀಪದಿಂದ ದೀಪವ, ಇಂದು ಬಾನೆಗೆಲ್ಲ ಹಬ್ಬ, ಸೇರಿದಂತೆ ಅನೇಕ ಗೀತೆಗೆಳು ಸುಮಧುರವಾಗಿ ಮೂಡಿಬಂದು, ನೆರೆದಿದ್ದವರು ಚಪ್ಪಾಳೆ ಮೂಲಕ ಹುರಿದುಂಬಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು