1:36 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

UGC| ವಿವಿಗಳಲ್ಲಿ ಪ್ರಧಾನಿ ಮೋದಿ ಸೆಲ್ಫಿ ಪಾಯಿಂಟ್: ಎನ್ ಎಸ್ ಯುಐ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ ಖಂಡನೆ

08/12/2023, 13:04

ಮಂಗಳೂರು(reporterkarnataka.com):ವಿಶ್ವವಿದ್ಯಾನಿಲಯ ಹಾಗೂ ಕಾಲೇಜುಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸೆಲ್ಫಿ ಪಾಯಿಂಟ್ ಗಳನ್ನು ಸ್ಥಾಪಿಸುವಂತೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು(ಯುಜಿಸಿ) ಸೂಚನೆ ನೀಡಿರುವುದನ್ನು ರಾಜ್ಯ ಎನ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ ಖಂಡನೆ ವ್ಯಕ್ತಪಡಿಸಿದ್ದಾರೆ.

ಯುಜಿಸಿಯು ಈ ತಾಣಗಳಲ್ಲಿ ಸೆಲ್ಫಿಗಳನ್ನು ಕ್ಲಿಕ್ಕಿಸಿಕೊಳ್ಳಲು ಮತ್ತು ಅವುಗಳನ್ನು ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲು ವಿದ್ಯಾರ್ಥಿಗಳು ಮತ್ತು ಸಂದರ್ಶಕರನ್ನು ಉತ್ತೇಜಿಸುವಂತೆ ಕ್ಯಾಂಪಸ್ ಅಧಿಕಾರಿಗಳನ್ನು ಹುರಿದುಂಬಿಸುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರಿಯಲ್ಲ. ಇದು ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿಯೂ ತೊಂದರೆಯಾಗಲಿದ್ದು, ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀಳುತ್ತದೆ.
ಬಿಜೆಪಿಯು ಮುಂಬರುವ ಲೋಕಸಭಾ ಚುನಾವಣೆ ಗುರಿಯಾಗಿಸಿ ಕ್ಯಾಂಪಸ್ ಗಳಲ್ಲಿ ಇಂತಹ ಅಭಿಯಾನ ನಡೆಸಿ ಯುವ ವಿದ್ಯಾರ್ಥಿಗಳನ್ನು ತನ್ನೆಡೆಗೆ ಸೆಳೆಯುವ ಹುನ್ನಾರ ಮಾಡುತ್ತಿರುವುದು ವಿಷಾದನೀಯ. ಪಕ್ಷದ ಪರವಾಗಿ ಪ್ರಚಾರ ಮಾಡಲು ತನ್ನದೇ ಆದ ವೇದಿಕೆಯಿದೆ, ಅದು ಬಿಟ್ಟು ಇಂತಹ ಚಟುವಟಿಕೆಗಳನ್ನು ಕಾಲೇಜು ಕ್ಯಾಂಪಸ್ ಗಳಲ್ಲಿ ಆರಂಭಿಸುವುದು ಸರಿಯಲ್ಲ. ಆದ್ದರಿಂದ ಯುಜಿಸಿಯು ಒಂದು ಸ್ವಾಯತ್ತ ಸಂಸ್ಥೆಯಾಗಿ ಇಂಹತ ಹುಚ್ಚಾಟಗಳಿಗೆ ಶೈಕ್ಷಣಿಕ ವ್ಯವಸ್ಥೆಯನ್ನು ಬಲಿಕೊಡಬಾರದು. ವಿದ್ಯಾರ್ಥಿಗಳ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ತನ್ನ ಸೂಚನೆಯನ್ನು ಹಿಂಪಡೆದಿದ್ದಲ್ಲಿ ವಿದ್ಯರ್ಥಿ ಚಳವಳಿ ನಡೆಸುವುದಾಗಿ ಸವಾದ್ ಸುಳ್ಯ ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು