4:06 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಉಗ್ರರ ಜತೆ ಗುಂಡಿನ ಕಾಳಗದಲ್ಲಿ ಮಡಿದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಮಂಗಳೂರಿನಲ್ಲಿ ಬಾಲ್ಯ ಕಳೆದಿದ್ದರು: ಎಂಆರ್ ಪಿಎಲ್ ನಿವೃತ್ತ ಎಂಡಿ ವೆಂಕಟೇಶ್ ಪುತ್ರ

23/11/2023, 18:09

ಕಾಶ್ಮೀರ (reporterkarnataka.com): ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಉಗ್ರಗಾಮಿಗಳ ಜತೆ ನಡೆದ ಗುಂಡಿನ ಚಕಮಕಿಯಲ್ಲಿ ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ , ಕರ್ನಾಟಕದ ಎಂ.ವಿ. ಪ್ರಾಂಜಲ್(28) ಸಹಿತ ನಾಲ್ವರು ಸೇನಾ ಸಿಬ್ಬಂದಿಗಳು ಹತರಾಗಿದ್ದಾರೆ. ಇವರಲ್ಲಿ ಕ್ಯಾ. ಪ್ರಾಂಜಲ್ ಅವರು ಮಂಗಳೂರಿನಲ್ಲೇ ಬಾಲ್ಯ ಕಳೆದಿದ್ದರು.
ಪ್ರಾಂಜಲ್ ಅವರು ಎಂಆರ್ ಪಿಎಲ್ ನ ನಿವೃತ್ತ ಆಡಳಿತ ನಿರ್ದೇಶಕ ಎಂ. ವೆಂಕಟೇಶ್ ಅವರ ಏಕೈಕ ಪುತ್ರ. ಪ್ರಾಂಜಲ್ ಅವರು ಪ್ರೈಮರಿ ಹಾಗೂ ಹೈಸ್ಕೂಲ್ ಶಿಕ್ಷಣವನ್ನು ಎಂಆರ್ ಪಿಎಲ್ ಬಳಿಯ ಪಬ್ಲಿಕ್ ಸ್ಕೂಲ್ ನಲ್ಲಿ ಪಡೆದಿದ್ದರು. ನಂತರ ಪಿಯು ಶಿಕ್ಷಣವನ್ನು ಮಂಗಳೂರಿನ ಮಹೇಶ್ ಕಾಲೇಜಿನಲ್ಲಿ ಪೂರೈಸಿದ್ದರು. ಇದಾದ ಬಳಿಕ ನ್ಯಾಪನಲ್ ಡಿಫೆನ್ಸ್ ಅಕಾಡೆಮಿಗೆ ಆಯ್ಕೆಗೊಂಡು ಅಲ್ಲಿ ಶಿಕ್ಷಣವನ್ನು ಪಡೆದರು. ಕಳೆದ ಎರಡು ವರ್ಷಗಳಿಂದ ಜಮ್ಮು- ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿದ್ದರು. 2 ವರ್ಷಗಳ ಹಿಂದೆ ಅದಿತಿ ಅವರ ಜತೆ ವಿವಾಹವಾಗಿದ್ದರು. ಪತ್ನಿ ಅದಿತಿ ಅವರು ಪಿಜಿ ಶಿಕ್ಷಣ ಪಡೆಯುತ್ತಿದ್ದಾರೆ.

ಕ್ಯಾ. ಪ್ರಾಂಜಲ್ ಅವರ ಅಂತ್ಯಕ್ರಿಯೆ ಬೆಂಗಳೂರಿನ ಬನ್ನೇರಘಟ್ಟದಲ್ಲಿರುವ ವೆಂಕಟೇಶ್ ಅವರ ನಿವಾಸದಲ್ಲಿ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು