3:00 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಉಗ್ರರ ಜತೆ ಗುಂಡಿನ ಕಾಳಗದಲ್ಲಿ ಮಡಿದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಮಂಗಳೂರಿನಲ್ಲಿ ಬಾಲ್ಯ ಕಳೆದಿದ್ದರು: ಎಂಆರ್ ಪಿಎಲ್ ನಿವೃತ್ತ ಎಂಡಿ ವೆಂಕಟೇಶ್ ಪುತ್ರ

23/11/2023, 18:09

ಕಾಶ್ಮೀರ (reporterkarnataka.com): ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಉಗ್ರಗಾಮಿಗಳ ಜತೆ ನಡೆದ ಗುಂಡಿನ ಚಕಮಕಿಯಲ್ಲಿ ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ , ಕರ್ನಾಟಕದ ಎಂ.ವಿ. ಪ್ರಾಂಜಲ್(28) ಸಹಿತ ನಾಲ್ವರು ಸೇನಾ ಸಿಬ್ಬಂದಿಗಳು ಹತರಾಗಿದ್ದಾರೆ. ಇವರಲ್ಲಿ ಕ್ಯಾ. ಪ್ರಾಂಜಲ್ ಅವರು ಮಂಗಳೂರಿನಲ್ಲೇ ಬಾಲ್ಯ ಕಳೆದಿದ್ದರು.
ಪ್ರಾಂಜಲ್ ಅವರು ಎಂಆರ್ ಪಿಎಲ್ ನ ನಿವೃತ್ತ ಆಡಳಿತ ನಿರ್ದೇಶಕ ಎಂ. ವೆಂಕಟೇಶ್ ಅವರ ಏಕೈಕ ಪುತ್ರ. ಪ್ರಾಂಜಲ್ ಅವರು ಪ್ರೈಮರಿ ಹಾಗೂ ಹೈಸ್ಕೂಲ್ ಶಿಕ್ಷಣವನ್ನು ಎಂಆರ್ ಪಿಎಲ್ ಬಳಿಯ ಪಬ್ಲಿಕ್ ಸ್ಕೂಲ್ ನಲ್ಲಿ ಪಡೆದಿದ್ದರು. ನಂತರ ಪಿಯು ಶಿಕ್ಷಣವನ್ನು ಮಂಗಳೂರಿನ ಮಹೇಶ್ ಕಾಲೇಜಿನಲ್ಲಿ ಪೂರೈಸಿದ್ದರು. ಇದಾದ ಬಳಿಕ ನ್ಯಾಪನಲ್ ಡಿಫೆನ್ಸ್ ಅಕಾಡೆಮಿಗೆ ಆಯ್ಕೆಗೊಂಡು ಅಲ್ಲಿ ಶಿಕ್ಷಣವನ್ನು ಪಡೆದರು. ಕಳೆದ ಎರಡು ವರ್ಷಗಳಿಂದ ಜಮ್ಮು- ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿದ್ದರು. 2 ವರ್ಷಗಳ ಹಿಂದೆ ಅದಿತಿ ಅವರ ಜತೆ ವಿವಾಹವಾಗಿದ್ದರು. ಪತ್ನಿ ಅದಿತಿ ಅವರು ಪಿಜಿ ಶಿಕ್ಷಣ ಪಡೆಯುತ್ತಿದ್ದಾರೆ.

ಕ್ಯಾ. ಪ್ರಾಂಜಲ್ ಅವರ ಅಂತ್ಯಕ್ರಿಯೆ ಬೆಂಗಳೂರಿನ ಬನ್ನೇರಘಟ್ಟದಲ್ಲಿರುವ ವೆಂಕಟೇಶ್ ಅವರ ನಿವಾಸದಲ್ಲಿ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು