7:50 PM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಉಗ್ರರ ಜತೆ ಗುಂಡಿನ ಕಾಳಗದಲ್ಲಿ ಮಡಿದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಮಂಗಳೂರಿನಲ್ಲಿ ಬಾಲ್ಯ ಕಳೆದಿದ್ದರು: ಎಂಆರ್ ಪಿಎಲ್ ನಿವೃತ್ತ ಎಂಡಿ ವೆಂಕಟೇಶ್ ಪುತ್ರ

23/11/2023, 18:09

ಕಾಶ್ಮೀರ (reporterkarnataka.com): ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಉಗ್ರಗಾಮಿಗಳ ಜತೆ ನಡೆದ ಗುಂಡಿನ ಚಕಮಕಿಯಲ್ಲಿ ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ , ಕರ್ನಾಟಕದ ಎಂ.ವಿ. ಪ್ರಾಂಜಲ್(28) ಸಹಿತ ನಾಲ್ವರು ಸೇನಾ ಸಿಬ್ಬಂದಿಗಳು ಹತರಾಗಿದ್ದಾರೆ. ಇವರಲ್ಲಿ ಕ್ಯಾ. ಪ್ರಾಂಜಲ್ ಅವರು ಮಂಗಳೂರಿನಲ್ಲೇ ಬಾಲ್ಯ ಕಳೆದಿದ್ದರು.
ಪ್ರಾಂಜಲ್ ಅವರು ಎಂಆರ್ ಪಿಎಲ್ ನ ನಿವೃತ್ತ ಆಡಳಿತ ನಿರ್ದೇಶಕ ಎಂ. ವೆಂಕಟೇಶ್ ಅವರ ಏಕೈಕ ಪುತ್ರ. ಪ್ರಾಂಜಲ್ ಅವರು ಪ್ರೈಮರಿ ಹಾಗೂ ಹೈಸ್ಕೂಲ್ ಶಿಕ್ಷಣವನ್ನು ಎಂಆರ್ ಪಿಎಲ್ ಬಳಿಯ ಪಬ್ಲಿಕ್ ಸ್ಕೂಲ್ ನಲ್ಲಿ ಪಡೆದಿದ್ದರು. ನಂತರ ಪಿಯು ಶಿಕ್ಷಣವನ್ನು ಮಂಗಳೂರಿನ ಮಹೇಶ್ ಕಾಲೇಜಿನಲ್ಲಿ ಪೂರೈಸಿದ್ದರು. ಇದಾದ ಬಳಿಕ ನ್ಯಾಪನಲ್ ಡಿಫೆನ್ಸ್ ಅಕಾಡೆಮಿಗೆ ಆಯ್ಕೆಗೊಂಡು ಅಲ್ಲಿ ಶಿಕ್ಷಣವನ್ನು ಪಡೆದರು. ಕಳೆದ ಎರಡು ವರ್ಷಗಳಿಂದ ಜಮ್ಮು- ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿದ್ದರು. 2 ವರ್ಷಗಳ ಹಿಂದೆ ಅದಿತಿ ಅವರ ಜತೆ ವಿವಾಹವಾಗಿದ್ದರು. ಪತ್ನಿ ಅದಿತಿ ಅವರು ಪಿಜಿ ಶಿಕ್ಷಣ ಪಡೆಯುತ್ತಿದ್ದಾರೆ.

ಕ್ಯಾ. ಪ್ರಾಂಜಲ್ ಅವರ ಅಂತ್ಯಕ್ರಿಯೆ ಬೆಂಗಳೂರಿನ ಬನ್ನೇರಘಟ್ಟದಲ್ಲಿರುವ ವೆಂಕಟೇಶ್ ಅವರ ನಿವಾಸದಲ್ಲಿ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು