7:48 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಉಜಿರೆ ಎಸ್ ಡಿಎಂ ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಮತ್ತು ಸೈನಿಕರು’ ವಿಷಯದ ಬಗ್ಗೆ ಆನ್ಲೈನ್ ಕಾರ್ಯಾಗಾರ

26/09/2021, 19:04

ಮಂಗಳೂರು(reporterkarnataka.com): ಉಜಿರೆ ಎಸ್ ಡಿಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ  ಪ್ರಯುಕ್ತ  ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ಮತ್ತು ಸೈನಿಕರು ಎಂಬ ವಿಷಯದ ಕುರಿತು ಆನ್ಲೈನ್ ಕಾರ್ಯಾಗಾರವು ಇತ್ತೀಚೆಗೆ ಜರುಗಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಭಾರತೀಯ ಸೇನೆಯ ನಿವೃತ್ತ ಯೋಧ ಬೆಳ್ಳಾಲ ಗೋಪಿನಾಥ ರಾವ್ ಮಾತನಾಡಿ, ವ್ಯಕ್ತಿತ್ವ ವಿಕಸನಕ್ಕೆ ನಿರಂತರ ಕಲಿಕೆ ಗುರಿ ಆತ್ಮವಿಶ್ವಾಸಗಳನ್ನು ರೂಢಿಸಿಕೊಳ್ಳಬೇಕು. ಸೇವೆಯೆ ಪರಮ ಗುರಿಯಾಗಬೇಕು ಎಂದು ಹೇಳಿದರು. 

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ  ಡಾ. ನಾಗರತ್ನ ಕೆ. ಎ. ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ  ಸಮಾಜಕ್ಕೆ ಉತ್ತಮ ನಾಗರಿಕರನ್ನು ನೀಡುವಲ್ಲಿ ಯೋಜನಾಧಿಕಾರಿಗಳ ಪರಿಶ್ರಮ ಕೂಡ ಗಮನಾರ್ಹ. ಅದಕ್ಕೆ ಉದಾಹರಣೆ  ಉಜಿರೆ ಎಸ್ ಡಿ.ಎಂ ಕಾಲೇಜಿನ ಸ್ವಯಂ ಸೇವಕ ಹೃತಿಕ್ ಎಂದು ಪ್ರಶಂಸೆ ವ್ಯಕ್ತ ಪಡಿಸಿದರು.
ವಿದ್ಯಾರ್ಥಿಗಳು ಎನ್ಎಸ್ಎಸ್ ನ ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಿ ಎಂದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಿನ್ಸಿಪಾಲ್ ಡಾ. ಸತೀಶ್ಚಂದ್ರ ಮಾತನಾಡಿ ಶಿಕ್ಷಣವನ್ನು ನಾಲ್ಕು  ಗೋಡೆಗಳ ಮಧ್ಯೆ  ಸೀಮಿತವಾಗಿಸದೆ. ಬಾಹ್ಯ ಪ್ರಪಂಚವನ್ನು ಪರಿಚಯಿಸುವುದರ ಜೊತೆಗೆ ವ್ಯಕ್ತಿತ್ವ ವಿಕಸನ,ಜ್ಞಾನ ಮತ್ತು ಕೌಶಲ್ಯವನ್ನು ತಿಳಿಸುವಂತಾಗಬೇಕು ಎಂದರು. 

ಯೋಜನಾಧಿಕಾರಿ ಡಾ. ಕೆ. ಎಸ್. ಲಕ್ಷ್ಮೀನಾರಾಯಣ ಸ್ವಾಗತಿಸಿದರು.  ದೀಪಾ. ಆರ್. ವಂದಿಸಿದರು. ಸ್ವಯಂ ಸೇವಕಿ ಜಯಶ್ರೀ ಅತಿಥಿಗಳನ್ನು ಪರಿಚಯಿಸಿ,  ವಸುಮತಿ ನಿರೂಪಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು