1:02 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಉಜಿರೆ ಎಸ್ ಡಿಎಂ ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಮತ್ತು ಸೈನಿಕರು’ ವಿಷಯದ ಬಗ್ಗೆ ಆನ್ಲೈನ್ ಕಾರ್ಯಾಗಾರ

26/09/2021, 19:04

ಮಂಗಳೂರು(reporterkarnataka.com): ಉಜಿರೆ ಎಸ್ ಡಿಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ  ಪ್ರಯುಕ್ತ  ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ಮತ್ತು ಸೈನಿಕರು ಎಂಬ ವಿಷಯದ ಕುರಿತು ಆನ್ಲೈನ್ ಕಾರ್ಯಾಗಾರವು ಇತ್ತೀಚೆಗೆ ಜರುಗಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಭಾರತೀಯ ಸೇನೆಯ ನಿವೃತ್ತ ಯೋಧ ಬೆಳ್ಳಾಲ ಗೋಪಿನಾಥ ರಾವ್ ಮಾತನಾಡಿ, ವ್ಯಕ್ತಿತ್ವ ವಿಕಸನಕ್ಕೆ ನಿರಂತರ ಕಲಿಕೆ ಗುರಿ ಆತ್ಮವಿಶ್ವಾಸಗಳನ್ನು ರೂಢಿಸಿಕೊಳ್ಳಬೇಕು. ಸೇವೆಯೆ ಪರಮ ಗುರಿಯಾಗಬೇಕು ಎಂದು ಹೇಳಿದರು. 

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ  ಡಾ. ನಾಗರತ್ನ ಕೆ. ಎ. ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ  ಸಮಾಜಕ್ಕೆ ಉತ್ತಮ ನಾಗರಿಕರನ್ನು ನೀಡುವಲ್ಲಿ ಯೋಜನಾಧಿಕಾರಿಗಳ ಪರಿಶ್ರಮ ಕೂಡ ಗಮನಾರ್ಹ. ಅದಕ್ಕೆ ಉದಾಹರಣೆ  ಉಜಿರೆ ಎಸ್ ಡಿ.ಎಂ ಕಾಲೇಜಿನ ಸ್ವಯಂ ಸೇವಕ ಹೃತಿಕ್ ಎಂದು ಪ್ರಶಂಸೆ ವ್ಯಕ್ತ ಪಡಿಸಿದರು.
ವಿದ್ಯಾರ್ಥಿಗಳು ಎನ್ಎಸ್ಎಸ್ ನ ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಿ ಎಂದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಿನ್ಸಿಪಾಲ್ ಡಾ. ಸತೀಶ್ಚಂದ್ರ ಮಾತನಾಡಿ ಶಿಕ್ಷಣವನ್ನು ನಾಲ್ಕು  ಗೋಡೆಗಳ ಮಧ್ಯೆ  ಸೀಮಿತವಾಗಿಸದೆ. ಬಾಹ್ಯ ಪ್ರಪಂಚವನ್ನು ಪರಿಚಯಿಸುವುದರ ಜೊತೆಗೆ ವ್ಯಕ್ತಿತ್ವ ವಿಕಸನ,ಜ್ಞಾನ ಮತ್ತು ಕೌಶಲ್ಯವನ್ನು ತಿಳಿಸುವಂತಾಗಬೇಕು ಎಂದರು. 

ಯೋಜನಾಧಿಕಾರಿ ಡಾ. ಕೆ. ಎಸ್. ಲಕ್ಷ್ಮೀನಾರಾಯಣ ಸ್ವಾಗತಿಸಿದರು.  ದೀಪಾ. ಆರ್. ವಂದಿಸಿದರು. ಸ್ವಯಂ ಸೇವಕಿ ಜಯಶ್ರೀ ಅತಿಥಿಗಳನ್ನು ಪರಿಚಯಿಸಿ,  ವಸುಮತಿ ನಿರೂಪಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು