4:22 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಉಜಿರೆ ಎಸ್ ಡಿಎಂ ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಮತ್ತು ಸೈನಿಕರು’ ವಿಷಯದ ಬಗ್ಗೆ ಆನ್ಲೈನ್ ಕಾರ್ಯಾಗಾರ

26/09/2021, 19:04

ಮಂಗಳೂರು(reporterkarnataka.com): ಉಜಿರೆ ಎಸ್ ಡಿಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ  ಪ್ರಯುಕ್ತ  ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ಮತ್ತು ಸೈನಿಕರು ಎಂಬ ವಿಷಯದ ಕುರಿತು ಆನ್ಲೈನ್ ಕಾರ್ಯಾಗಾರವು ಇತ್ತೀಚೆಗೆ ಜರುಗಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಭಾರತೀಯ ಸೇನೆಯ ನಿವೃತ್ತ ಯೋಧ ಬೆಳ್ಳಾಲ ಗೋಪಿನಾಥ ರಾವ್ ಮಾತನಾಡಿ, ವ್ಯಕ್ತಿತ್ವ ವಿಕಸನಕ್ಕೆ ನಿರಂತರ ಕಲಿಕೆ ಗುರಿ ಆತ್ಮವಿಶ್ವಾಸಗಳನ್ನು ರೂಢಿಸಿಕೊಳ್ಳಬೇಕು. ಸೇವೆಯೆ ಪರಮ ಗುರಿಯಾಗಬೇಕು ಎಂದು ಹೇಳಿದರು. 

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ  ಡಾ. ನಾಗರತ್ನ ಕೆ. ಎ. ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ  ಸಮಾಜಕ್ಕೆ ಉತ್ತಮ ನಾಗರಿಕರನ್ನು ನೀಡುವಲ್ಲಿ ಯೋಜನಾಧಿಕಾರಿಗಳ ಪರಿಶ್ರಮ ಕೂಡ ಗಮನಾರ್ಹ. ಅದಕ್ಕೆ ಉದಾಹರಣೆ  ಉಜಿರೆ ಎಸ್ ಡಿ.ಎಂ ಕಾಲೇಜಿನ ಸ್ವಯಂ ಸೇವಕ ಹೃತಿಕ್ ಎಂದು ಪ್ರಶಂಸೆ ವ್ಯಕ್ತ ಪಡಿಸಿದರು.
ವಿದ್ಯಾರ್ಥಿಗಳು ಎನ್ಎಸ್ಎಸ್ ನ ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಿ ಎಂದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಿನ್ಸಿಪಾಲ್ ಡಾ. ಸತೀಶ್ಚಂದ್ರ ಮಾತನಾಡಿ ಶಿಕ್ಷಣವನ್ನು ನಾಲ್ಕು  ಗೋಡೆಗಳ ಮಧ್ಯೆ  ಸೀಮಿತವಾಗಿಸದೆ. ಬಾಹ್ಯ ಪ್ರಪಂಚವನ್ನು ಪರಿಚಯಿಸುವುದರ ಜೊತೆಗೆ ವ್ಯಕ್ತಿತ್ವ ವಿಕಸನ,ಜ್ಞಾನ ಮತ್ತು ಕೌಶಲ್ಯವನ್ನು ತಿಳಿಸುವಂತಾಗಬೇಕು ಎಂದರು. 

ಯೋಜನಾಧಿಕಾರಿ ಡಾ. ಕೆ. ಎಸ್. ಲಕ್ಷ್ಮೀನಾರಾಯಣ ಸ್ವಾಗತಿಸಿದರು.  ದೀಪಾ. ಆರ್. ವಂದಿಸಿದರು. ಸ್ವಯಂ ಸೇವಕಿ ಜಯಶ್ರೀ ಅತಿಥಿಗಳನ್ನು ಪರಿಚಯಿಸಿ,  ವಸುಮತಿ ನಿರೂಪಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು