7:39 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ಯುಕೋ ಬ್ಯಾಂಕ್ ಬಹುಕೋಟಿ ಐಎಂಪಿಎಸ್ ಹಗರಣ: ಮಂಗಳೂರು ಸೇರಿದಂತೆ ರಾಜ್ಯದ 13 ಕಡೆಗಳಲ್ಲಿ ಸಿಬಿಐ ಶೋಧ; ಅಧಿಕಾರಿಗಳ ವಿಚಾರಣೆ

07/12/2023, 12:47

ಮಂಗಳೂರು(reporterkarnataka.com): ಯುಕೋ ಬ್ಯಾಂಕ್ ಬಹುಕೋಟಿ ಹಗರಣ ಸಂಬಂಧಿಸಿದಂತೆ ಸಿಬಿಐ ಮಂಗಳೂರು ಸೇರಿದಂತೆ ರಾಜ್ಯದ 13 ಕಡೆಗಳಲ್ಲಿ ತನಿಖೆ ನಡೆಸಿದೆ.
ಯುಕೋ ಬ್ಯಾಂಕ್ ಖಾತೆಗಳಲ್ಲಿ 820 ಕೋಟಿ ರೂಪಾಯಿಗಳ ತಕ್ಷಣದ ಪಾವತಿ ಸೇವೆ (ಐಎಂಪಿಎಸ್) ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಮಂಗಳೂರು ಸೇರಿದಂತೆ ರಾಜ್ಯದ 13 ಕಡೆಗಳಲ್ಲಿ ತನಿಖೆ ನಡೆಸಿ ಶೋಧ ಕಾರ್ಯ ನಡೆಸಿದೆ.
ಬ್ಯಾಂಕ್ ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು ಹಾಗೂ ಆರೋಪಿಗಳನ್ನು ಸಿಬಿಐ ವಿಚಾರಣೆಗೊಳಪಡಿಸಿದೆ. ತನಿಖೆ ವೇಳೆ ಮೊಬೈಲ್ ಫೋನ್‌, ಲ್ಯಾಪ್‌ಟಾಪ್‌, ಕಂಪ್ಯೂಟರ್ ಸಿಸ್ಟಮ್‌ಗಳು, ಇಮೇಲ್ ಆರ್ಕೈವ್‌ಗಳು, ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಯುಕೋ ಬ್ಯಾಂಕ್ ನಿಂದ ಬಂದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಅನುಮಾನಾಸ್ಪದ ಐಎಂಪಿಎಸ್ ವಹಿವಾಟಿನ ಆರೋಪದ ಮೇಲೆ ಬ್ಯಾಂಕ್‌ನ ಇಬ್ಬರು ಸಹಾಯಕ ಎಂಜಿನಿಯರ್‌ಗಳು ಮತ್ತು ಇತರ ಅನುಮಾನಾಸ್ಪದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಖಾಸಗಿ ಬ್ಯಾಂಕ್ ಖಾತೆದಾರರ 14,000 ಖಾತೆಗಳಿಂದ ಯುಕೊ ಬ್ಯಾಂಕ್ ನ 41,000 ಬ್ಯಾಂಕ್ ಖಾತೆಗಳಿಗೆ ಆಂತರಿಕ ಐಎಂಪಿಎಸ್ ವಹಿವಾಟಿನ ಮೂಲಕ ನವೆಂಬರ್ 10-13ರವರೆಗೆ 820 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ತಮ್ಮ ಬ್ಯಾಂಕ್ ಖಾತೆಗಳಲ್ಲಿ ಇದ್ದಕ್ಕಿದ್ದ ಹಾಗೆ ಮೊತ್ತವನ್ನು ನೋಡಿದ ಕೆಲವು ಖಾತೆದಾರರು ಅದನ್ನು ಹಿಂಪಡೆದಿದ್ದಾರೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಸಿಬಿಐ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು