2:58 AM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಉಕ್ರೇನ್ ನಲ್ಲಿ ಸಿಲುಕಿದ್ದ ಅಥಣಿ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ, ಆಫ್ರಿನ್ ನಿಡೋಣಿ ಮರಳಿ ತಾಯ್ನಾಡಿಗೆ

11/03/2022, 09:26

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿದ್ದ ಅಥಣಿಯ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ, ಆಫ್ರಿನ್ ನಿಡೋಣಿ ಮರಳಿ ತಾಯ್ನಾಡಿಗೆ ಬಂದಿದ್ದಾರೆ.

ಮರಳಿ ಬಂದ ಮಕ್ಕಳಿಗೆ ಕುಟುಂಬಸ್ಥರು ಆರತಿ ಎತ್ತಿ ಸ್ವಾಗತ ಕೋರಿದರು.
ಮಕ್ಕಳ ತಬ್ಬಿಕೊಂಡು ತಾಯಿ ತಂದೆ ಬಾವುಕರಾದರು.

ನಾವು ಮರಳಿ ತಾಯ್ನಾಡಿಗೆ ಬರುತ್ತೇವೆ ಎಂಬ ನಂಬಿಕೆ ನಮಗೆ ಇರಲಿಲ್ಲ ಎಂದು ಉಕ್ರೇನಿನ ರಣ ಭೀಕರ ಕಹಾನಿಯನ್ನು ವಿದ್ಯಾರ್ಥಿಗಳು ಬಿಚ್ಚಿಟ್ಟರು.

ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ದೇಶಕ್ಕೆ ಹೋದ ಅದೆಷ್ಟೋ ವಿದ್ಯಾರ್ಥಿಗಳಿಗೆ ಭಾರತದ ತ್ರಿರಂಗ ಧ್ವಜ ರಕ್ಷಾ ಕವಚ ವಾಗಿತ್ತು. ನಾವು ನಮ್ಮ ದೇಶದ ಬಾವುಟ ತೋರಿಸಿ ಸುರಕ್ಷಿತವಾಗಿ ನಮ್ಮ

ತಾಯ್ನಾಡಿಗೆ ಬಂದಿದ್ದೇವೆ. ಅದು ಅಲ್ಲಿ ನಮ್ಮ ದೇಶಕ್ಕಿರೋ ಗೌರವ.ಬೇರೆ ದೇಶದವರು ನಮ್ಮ ದೇಶದ ಭಾವುಟ ಹಿಡಿದು ರಕ್ಷಣೆ

ಪಡೆದಿದ್ದಾರೆ. ಇದು ನಮ್ಮ್ ದೇಶದ ತಾಕತ್ತು ಎಂದು ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ ಹಾಗೂ ಆಫ್ರಿನ್ ನಿಡೋಣಿ ಹೇಳಿದರು.

ಮರಳಿ ಬರಲು ಸಹಾಯ ಮಾಡಿದ ಇಂಡಿಯನ್ ಎಂಬೆಸಿ, ಭಾರತ ಸರಕಾರ, ರಾಜ್ಯ ಸರ್ಕಾರಕ್ಕೆ ಮತ್ತು ಅಥಣಿ ಸ್ಥಳೀಯ ತಹಸೀಲ್ದಾರ್ ದುಂಡಪ್ಪ ಕೋಮಾರ ಅವರಿಗೆ ವಿಶೇಷ ಅಭಿನಂದನೆ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು