11:53 AM Monday13 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಉಕ್ರೇನ್ ನಲ್ಲಿ ಸಿಲುಕಿದ್ದ ಅಥಣಿ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ, ಆಫ್ರಿನ್ ನಿಡೋಣಿ ಮರಳಿ ತಾಯ್ನಾಡಿಗೆ

11/03/2022, 09:26

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿದ್ದ ಅಥಣಿಯ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ, ಆಫ್ರಿನ್ ನಿಡೋಣಿ ಮರಳಿ ತಾಯ್ನಾಡಿಗೆ ಬಂದಿದ್ದಾರೆ.

ಮರಳಿ ಬಂದ ಮಕ್ಕಳಿಗೆ ಕುಟುಂಬಸ್ಥರು ಆರತಿ ಎತ್ತಿ ಸ್ವಾಗತ ಕೋರಿದರು.
ಮಕ್ಕಳ ತಬ್ಬಿಕೊಂಡು ತಾಯಿ ತಂದೆ ಬಾವುಕರಾದರು.

ನಾವು ಮರಳಿ ತಾಯ್ನಾಡಿಗೆ ಬರುತ್ತೇವೆ ಎಂಬ ನಂಬಿಕೆ ನಮಗೆ ಇರಲಿಲ್ಲ ಎಂದು ಉಕ್ರೇನಿನ ರಣ ಭೀಕರ ಕಹಾನಿಯನ್ನು ವಿದ್ಯಾರ್ಥಿಗಳು ಬಿಚ್ಚಿಟ್ಟರು.

ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ದೇಶಕ್ಕೆ ಹೋದ ಅದೆಷ್ಟೋ ವಿದ್ಯಾರ್ಥಿಗಳಿಗೆ ಭಾರತದ ತ್ರಿರಂಗ ಧ್ವಜ ರಕ್ಷಾ ಕವಚ ವಾಗಿತ್ತು. ನಾವು ನಮ್ಮ ದೇಶದ ಬಾವುಟ ತೋರಿಸಿ ಸುರಕ್ಷಿತವಾಗಿ ನಮ್ಮ

ತಾಯ್ನಾಡಿಗೆ ಬಂದಿದ್ದೇವೆ. ಅದು ಅಲ್ಲಿ ನಮ್ಮ ದೇಶಕ್ಕಿರೋ ಗೌರವ.ಬೇರೆ ದೇಶದವರು ನಮ್ಮ ದೇಶದ ಭಾವುಟ ಹಿಡಿದು ರಕ್ಷಣೆ

ಪಡೆದಿದ್ದಾರೆ. ಇದು ನಮ್ಮ್ ದೇಶದ ತಾಕತ್ತು ಎಂದು ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳಾದ ರಕ್ಷಿತಾ ಗಣಿ ಹಾಗೂ ಆಫ್ರಿನ್ ನಿಡೋಣಿ ಹೇಳಿದರು.

ಮರಳಿ ಬರಲು ಸಹಾಯ ಮಾಡಿದ ಇಂಡಿಯನ್ ಎಂಬೆಸಿ, ಭಾರತ ಸರಕಾರ, ರಾಜ್ಯ ಸರ್ಕಾರಕ್ಕೆ ಮತ್ತು ಅಥಣಿ ಸ್ಥಳೀಯ ತಹಸೀಲ್ದಾರ್ ದುಂಡಪ್ಪ ಕೋಮಾರ ಅವರಿಗೆ ವಿಶೇಷ ಅಭಿನಂದನೆ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು