11:44 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಉಕ್ರೇನ್ ನಿಂದ ವಾಪಸಾದ ವಿದ್ಯಾರ್ಥಿಗಳಿಂದ ಜಿಲ್ಲಾಧಿಕಾರಿಗೆ ಥ್ಯಾಂಕ್ಸ್: ಹೂಗುಚ್ಛ ನೀಡಿ ಸತ್ಕರಿಸಿದ ಡಿಸಿ

07/03/2022, 22:36

ಮಂಗಳೂರು(reporterkarnataka.com):  ಉಕ್ರೇನ್ ನಿಂದ ಆಗಮಿಸಿದ ಮಂಗಳೂರು ತಾಲೂಕಿನ ಅನನ್ಯಾ ಅನ್ನಾ, ಕ್ಲಾಟಸ್ ಒಸ್ಮಂಡ್ ಡಿಸೋಜಾ, ಅಹಮದ್ ಸಾದ್ ಅರ್ಷಾದ್, ಲಕ್ಷಣ ಪುರುಷೊತ್ತಮ ಹಾಗೂ ಮೂಡುಬಿದ್ರೆ ತಾಲೂಕಿನ ಶಲ್ವಿನ್ ಪ್ರೀತಿ ಅರ್ನಾ ಐವರು ವಿದ್ಯಾರ್ಥಿಗಳು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರನ್ನು ಭೇಟಿ ಮಾಡಿ ಧನ್ಯವಾದ ತಿಳಿಸಿದರು.

ಇದೇ ಸಂದರ್ಭದಲ್ಲಿ ತಮ್ಮ ಅನುಭವಗಳನ್ನು ಜಿಲ್ಲಾಧಿಕಾರಿಯವರೊಂದಿಗೆ ಹಂಚಿಕೊಂಡರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡು ಅವರಿಗೆ ಹೂಗುಚ್ಛ ಹಾಗೂ ಪುಸ್ತಕ ನೀಡಿ ಸ್ವಾಗತಿಸಿದರು.

ವಿದ್ಯಾರ್ಥಿಗಳು ಮನೆಗೆ ಹೋಗದೇ ವಿಮಾನ ನಿಲ್ದಾಣದಿಂದ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಬಂದು, ಜಿಲ್ಲಾಧಿಕಾರಿಯವರೊಂದಿಗೆ ಕೇಕ್ ಕತ್ತರಿಸಿದ್ದು, ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪೋಷಕರು ಕೂಡ ಇದ್ದರು. ಮಂಗಳೂರಿಗೆ ಈ ವಿದ್ಯಾರ್ಥಿಗಳನ್ನು ಕರೆತರುವಲ್ಲಿ ಜಿಲ್ಲಾಧಿಕಾರಿಯವರು ವಹಿಸಿದ ಮಹತ್ತರ ಪಾತ್ರದ ಬಗ್ಗೆ ವಿದ್ಯಾರ್ಥಿಗಳು ಸ್ಮರಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು