9:38 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಉಕ್ರೇನ್ ನಿಂದ ವಾಪಸಾದ ವಿದ್ಯಾರ್ಥಿಗಳಿಂದ ಜಿಲ್ಲಾಧಿಕಾರಿಗೆ ಥ್ಯಾಂಕ್ಸ್: ಹೂಗುಚ್ಛ ನೀಡಿ ಸತ್ಕರಿಸಿದ ಡಿಸಿ

07/03/2022, 22:36

ಮಂಗಳೂರು(reporterkarnataka.com):  ಉಕ್ರೇನ್ ನಿಂದ ಆಗಮಿಸಿದ ಮಂಗಳೂರು ತಾಲೂಕಿನ ಅನನ್ಯಾ ಅನ್ನಾ, ಕ್ಲಾಟಸ್ ಒಸ್ಮಂಡ್ ಡಿಸೋಜಾ, ಅಹಮದ್ ಸಾದ್ ಅರ್ಷಾದ್, ಲಕ್ಷಣ ಪುರುಷೊತ್ತಮ ಹಾಗೂ ಮೂಡುಬಿದ್ರೆ ತಾಲೂಕಿನ ಶಲ್ವಿನ್ ಪ್ರೀತಿ ಅರ್ನಾ ಐವರು ವಿದ್ಯಾರ್ಥಿಗಳು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರನ್ನು ಭೇಟಿ ಮಾಡಿ ಧನ್ಯವಾದ ತಿಳಿಸಿದರು.

ಇದೇ ಸಂದರ್ಭದಲ್ಲಿ ತಮ್ಮ ಅನುಭವಗಳನ್ನು ಜಿಲ್ಲಾಧಿಕಾರಿಯವರೊಂದಿಗೆ ಹಂಚಿಕೊಂಡರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡು ಅವರಿಗೆ ಹೂಗುಚ್ಛ ಹಾಗೂ ಪುಸ್ತಕ ನೀಡಿ ಸ್ವಾಗತಿಸಿದರು.

ವಿದ್ಯಾರ್ಥಿಗಳು ಮನೆಗೆ ಹೋಗದೇ ವಿಮಾನ ನಿಲ್ದಾಣದಿಂದ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಬಂದು, ಜಿಲ್ಲಾಧಿಕಾರಿಯವರೊಂದಿಗೆ ಕೇಕ್ ಕತ್ತರಿಸಿದ್ದು, ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪೋಷಕರು ಕೂಡ ಇದ್ದರು. ಮಂಗಳೂರಿಗೆ ಈ ವಿದ್ಯಾರ್ಥಿಗಳನ್ನು ಕರೆತರುವಲ್ಲಿ ಜಿಲ್ಲಾಧಿಕಾರಿಯವರು ವಹಿಸಿದ ಮಹತ್ತರ ಪಾತ್ರದ ಬಗ್ಗೆ ವಿದ್ಯಾರ್ಥಿಗಳು ಸ್ಮರಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು